day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕೊರೋನಾ ಸಂಕಷ್ಟದಲ್ಲಿಯೂ ಶ್ರೀ ಚರಣ್ ಸೌಹಾರ್ದ ಬ್ಯಾಂಕಿಗೆ 159.30 ಲಕ್ಷ ರೂಪಾಯಿ ಲಾಭ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಕೊರೋನಾ ಸಂಕಷ್ಟದಲ್ಲಿಯೂ ಶ್ರೀ ಚರಣ್ ಸೌಹಾರ್ದ ಬ್ಯಾಂಕಿಗೆ 159.30 ಲಕ್ಷ ರೂಪಾಯಿ ಲಾಭ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಕೊರೋನಾ ಸಂಕಷ್ಟದಲ್ಲಿಯೂ ಶ್ರೀ ಚರಣ್ ಸೌಹಾರ್ದ ಬ್ಯಾಂಕಿಗೆ 159.30 ಲಕ್ಷ ರೂಪಾಯಿ ಲಾಭ
ಬೆಂಗಳೂರು, ನವೆಂಬರ್ 21, 2020: ಕೊರೋನಾದಿಂದ ವಿಶ್ವದಾದ್ಯಂತ ಆರ್ಥಿಕ ಸಂಕಷ್ಟ ಇದ್ದಾಗ್ಯೂ ಶ್ರೀ ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ 2019-20 ನೇ ಹಣಕಾಸು ಸಾಲಿನಲ್ಲಿ 159.30 ಲಕ್ಷ ರೂಪಾಯಿಗಳ ನಿವ್ವಳ ಲಾಭ ಗಳಿಸಿದೆ.
ಬ್ಯಾಂಕಿನ ಈ ಸಾಧನೆ ಮತ್ತು ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿರುವ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ದ್ವಾರಕನಾಥ್ ಅವರು, “2019-20 ನೇ ಹಣಕಾಸು ಸಾಲಿನಲ್ಲಿ ಬ್ಯಾಂಕು ತನ್ನ 10 ಶಾಖೆಗಳಲ್ಲಿ ಷೇರು ಬಂಡವಾಳ, ಠೇವಣಾತಿಯ ಸಂಗ್ರಹ, ಸದಸ್ಯರಿಗೆ ಸಮಗ್ರ ರೀತಿಯಲ್ಲಿ ಸಾಲಗಳ ವಿತರಣೆ ಮತ್ತು ಹೂಡಿಕೆಗಳ ನಿರ್ವಹಣೆ ಸೇರಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿರುವ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದೆ’’ ಎಂದು ತಿಳಿಸಿದರು.
2020 ರ ಮಾರ್ಚ್ ಅಂತ್ಯಕ್ಕೆ ಕೊನೆಗೊಂಡ 2019-20 ನೇ ಸಾಲಿನಲ್ಲಿ ಷೇರು ಬಂಡವಾಳದೊಂದಿಗೆ 4459.65 ಲಕ್ಷ ರೂಪಾಯಿಗಳಷ್ಟು ಸ್ವಂತ ನಿಧಿಯನ್ನು ಕ್ರೋಢೀಕರಿಸಿದೆ ಮತ್ತು 72,417.26 ಲಕ್ಷ ರೂಪಾಯಿಯಷ್ಟು ದುಡಿಯುವ ಬಂಡವಾಳದೊಂದಿಗೆ ಪ್ರಗತಿಪಥದೆಡೆಗೆ ಸಾಗಿದೆ ಎಂದು ಅವರು ಹೇಳಿದರು.
ವಿಶ್ವದಾದ್ಯಂತ ಕೊರೋನಾ ವೈರಸ್ ನ ಪರಿಣಾಮದಿಂದ ತೀವ್ರ ಸಂಕಷ್ಟ ಎದುರಾಗಿದೆ. ಆರ್ಥಿಕ ಕ್ಷೇತ್ರದ ಮೇಲೆ ಇದರ ಪರಿಣಾಮ ಸಾಕಷ್ಟು ಆಗಿದೆ. ಆದರೆ, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ನಮ್ಮ ಬ್ಯಾಂಕ್ 1,59,30,000 ರೂಪಾಯಿಗಳ ನಿವ್ವಳ ಲಾಭವನ್ನು ಗಳಿಸಿರುವುದು ನಮಗೆಲ್ಲರಿಗೂ ಸಂತಸವನ್ನುಂಟು ಮಾಡಿದೆ ಎಂದರು.
ಬ್ಯಾಂಕಿನ ಈ ಅಭೂತಪೂರ್ವವಾದ ಸಾಧನೆಗೆ ನಮ್ಮ ನೆಚ್ಚಿನ ಗ್ರಾಹಕರು, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ಅಧಿಕಾರಿಗಳು ಮತ್ತು ಹಿತೈಷಿಗಳು ಕಾರಣರಾಗಿದ್ದಾರೆ. ಅವರಿಗೆ ನಮ್ಮ ಬ್ಯಾಂಕಿನ ವತಿಯಿಂದ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಹೇಳಿದರು.

About Author