day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಆಮ್ ಆದ್ಮಿ ಪಕ್ಷ: 8ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರೋಮಿ ಭಾಟಿ ಅಭಿಮತ #avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಆಮ್ ಆದ್ಮಿ ಪಕ್ಷ: 8ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರೋಮಿ ಭಾಟಿ ಅಭಿಮತ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಭಾರತದ ಮುಂದಿನ ಭರವಸೆ ಆಮ್ ಆದ್ಮಿ ಪಕ್ಷ: 8ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರೋಮಿ ಭಾಟಿ ಅಭಿಮತ
ಮಹಾತ್ಮ ಗಾಂಧೀಜಿ ಅವರ ಸ್ವರಾಜ್ಯ ಕಲ್ಪನೆಯ ಮೇಲೆ ಸ್ಥಾಪಿತವಾದ ಆಮ್ ಆದ್ಮಿ ಪಕ್ಷ ಇಂದು ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾಗಿದ್ದು ಭಾರತದ ಮುಂದಿನ ಭರವಸೆಯಾಗಿದೆ ಎಂದು ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ನುಡಿದರು.
ಗುರುವಾರ ಸಂಜೆ ಹಲಸೂರು ಕೆರೆ ಬಳಿಯ ಆರ್ಬಿಎನ್ಎಂಎಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ 8ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿ, ವರ್ಷ ಎಂಟು ಸಾಧನೆ ನೂರೆಂಟು ಎನ್ನುವ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಡೀ ಭಾರತದ ರಾಜಕೀಯ ಇತಿಹಾಸದಲ್ಲಿ ಇಷ್ಟು ವೇಗವಾಗಿ ಬೆಳೆದ ರಾಜಕೀಯ ಪಕ್ಷ ಇನ್ನೊಂದಿಲ್ಲ. ಕೇವಲ ಎಂಟು ವರ್ಷದಲ್ಲಿ ನೂರೆಂಟು ಸಾಧನೆ ಮಾಡಿದ ಆಮ್ ಆದ್ಮಿ ಪಕ್ಷ ಭಾರತದ 130 ಕೋಟಿ ಜನರಲ್ಲಿ ಬದಲಾವಣೆಯ ಭರವಸೆ ಮೂಡಿಸಿದೆ ಎಂದರು.
ರಾಷ್ಟ್ರೀಯ ನಾಯಕರಾದ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಗದ್ದುಗೆಯನ್ನು 3 ಬಾರಿ ಏರಿದ್ದು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ದೆಹಲಿಯ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಮಾಡಿದ ಕ್ರಾಂತಿಕಾರಕ ಬದಲಾವಣೆಗಳಿಂದ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ಸರ್ಕಾರ ವಿಶ್ವದರ್ಜೆಯ
ಸೌಲಭ್ಯಗಳನ್ನು ತನ್ನ ಜನರಿಗೆ ಪರಿಚಯಿಸಿದೆ ಎಂದರು.
9 ನೇ ಸಂಸ್ಥಾಪನಾ ದಿನವನ್ನು ಬಿಬಿಎಂಪಿ ಅಧಿಕಾರ ಹಿಡಿಯುವುದರ ಮೂಲಕ ಆಚರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ತಮ್ಮ ಪ್ರಾಣದ ಹಂಗನ್ನು ತೊರೆದು ಲಾಕ್ಡೌನ್ ವೇಳೆ ದುಡಿದ ಕರುನಾಡಿನ ಹೆಮ್ಮೆಯ ಕೊರೋನಾ ಯೋದರನ್ನು ಸನ್ಮಾನಿಸಲಾಯಿತು.
ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ, ಸಹ ಸಂಚಾಲಕ ವಿಜಯ್ ಶರ್ಮ, ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಮುಖ್ಯ ವಕ್ತಾರ ಶರತ್ ಖಾದ್ರಿ ಇದ್ದರು.
ಇದೇ ವೇಳೆ ಅರವಿಂದ ಕೇಜ್ರಿವಾಲ್ ಅವರ ರಾಜಕೀಯ ಜೀವನ ಆಧಾರಿತ “ಇನ್ಸಿಗ್ನಿಫಿಕೆಂಟ್ ಮ್ಯಾನ್” ಚಲನಚಿತ್ರ ಪ್ರದರ್ಶನ ಹಾಗೂ
ಏಷ್ಯಾದ ಬಲಶಾಲಿ ವ್ಯಕ್ತಿ ಮನೋಜ್ ಚೋಪ್ರಾ ಅವರಿಂದ ಶಕ್ತಿ ಪ್ರದರ್ಶನ ಕಾರ್ಯಕ್ರಮ ನಡೆಸಲಾಯಿತು.
ಫೋಟೋ ಕ್ಯಾಪ್ಶನ್: ಆಮ್ ಆದ್ಮಿ ಪಕ್ಷದ 8 ನೇ ವರ್ಷದ ಸಂಸ್ಥಾಪನಾ ದಿನದ ಪ್ರಯುಕ್ತ ಲಾಕ್ಡೌನ್ ವೇಳೆ ಕೊರೋನಾ ಯೋದರಾಗಿ ದುಡಿದ, ವಲಸೆ ಕಾರ್ಮಿಕರಿಗೆ, ಅಶಕ್ತರಿಗೆ ಊಟದ ವ್ಯವಸ್ಥೆ ಮಾಡಿದ, ನಾನಾ ರೀತಿಯಲ್ಲಿ ಜನರ ನೆರವಿಗೆ ನಿಂತ 26 ಮಂದಿಗೆ ಸನ್ಮಾನ ಮಾಡಲಾಯಿತು

About Author