day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರುಗಳಿಗೆ ಇನ್ಪೋಸಿಸ್ ಪ್ರತಿಷ್ಠಾನದ ನೆರವು #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರುಗಳಿಗೆ ಇನ್ಪೋಸಿಸ್ ಪ್ರತಿಷ್ಠಾನದ ನೆರವು #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರುಗಳಿಗೆ ಇನ್ಪೋಸಿಸ್‌ ಪ್ರತಿಷ್ಠಾನದ ನೆರವು

  • ಕೋವಿಡ್‌ ಲಾಕ್‌ಡೌನ್‌ ನಿಂದ ತೊಂದರೆಗೆ ಈಡಾಗಿರುವ ಪೋಷಕ ಕಲಾವಿದರಿಗೆ ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ಜೀವನಾವ‍್ಯಕ ವಸ್ತುಗಳ ಕಿಟ್ ವಿತರಣೆ
  • ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್‌ ಹಾಗೂ ಸಮಾಜಸೇವಕ ನಿರ್ಮಾಪಕ ರಮೇಶ್‌ ರೆಡ್ಡಿ ಉಪಸ್ಥಿತಿ

ಬೆಂಗಳೂರು ಡಿಸೆಂಬರ್‌ 14: ಕರೋನಾ ಸೊಂಕಿನಿಂದ ನಲುಗಿಹೋಗಿರುವ ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರಿಗೆ ಇನ್ಪೋಸಿಸ್‌ ಪ್ರತಿಷ್ಟಾನ ಆಹಾರ ಕಿಟ್‌ಗಳ ವಿತರಣೆ ಮಾಡುವ ಮೂಲಕ ಕಲಾವಿದರ ನೆರವಿಗೆ ಧಾವಿಸಿದೆ.  ಇನ್ಪೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ಅವರು ಕಷ್ಟದಲ್ಲಿರುವವರಿಗೆ ಮನಮಿಡಿಯುವ ರೀತಿ ಹಾಗೂ ಬಡವರ ಬಗ್ಗೆ ಅವರಿಗಿರುವ ಕಾಳಜಿ ಅನುಕರಣೀಯ ಎಂದು ನಟಿ ಪ್ರೇಮ ಹೇಳಿದರು.

ನಗರದ ಸುಚಿತ್ರಾ ಫಿಲಂ ಸೊಸೈಟಿಯ ಆವರಣದಲ್ಲಿ ಚಲನಚಿತ್ರ ಪೋಷಕ ಕಲಾವಿದರು ಮತ್ತು ಕಾರ್ಮಿಕರುಗಳಿಗೆ ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಜೀವನಾವ‍್ಯಕ ವಸ್ತುಗಳ ಕಿಟ್‌ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಷ್ಟಕ್ಕೆ ಮನಮಿಡಿಯುವ ಹಾಗೂ ಅಗತ್ಯವಿರವವರಿಗೆ ವಿಶೇಷ ಕಾಳಜಿ ತೋರಿಸುವ ಸುಧಾಮೂರ್ತಿ ಅಮ್ಮನವರ ಸಂಸ್ಥೆಯಿಂದ ಕೊಡಲಾಗುತ್ತಿರುವ ಜೀವನಾವ‍್ಯಕ ವಸ್ತುಗಳ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬಹಳ ಹೆಮ್ಮೆಯ ವಿಷಯವಾಗಿದೆ. ಸಿನಿಮಾ ಕಾರ್ಮಿಕರು ಚಿತ್ರೀಕರಣ ನಿಲುಗಡೆಯಾದ ಪರಿಣಾಮ ಬಹಳಷ್ಟು ತೊಂದರೆಗೀಡಾಗಿದ್ದರು. ಇವರಿಗೆ ದಿನನಿತ್ಯದ ಅಗತ್ಯ ಸಾಮಗ್ರಿಗಳನ್ನು ಒಳಗೊಂಡ ಕಿಟ್‌ ವಿತರಿಸಲಾಗುತ್ತಿದ್ದು, ಅವರ ಕುಟುಂಬ ಪೋಷಣೆಗೆ ಇದು ಅಗತ್ಯವಾಗಿದೆ ಎಂದು ಹೇಳಿದರು.

ಕರ್ನಾಟಕ ಚಲನ ಚಿತ್ರ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್‌ ಮಾತನಾಡಿ, ನನಗೆ ಅಮ್ಮ ಸುಧಾಮೂರ್ತಿ ಅವರ ಸಂಫರ್ಕ ಇರಲಿಲ್ಲ. ಎರಡನೇ ಬಾರಿ ನಾನು ಮಾಡಿದ ಎಸ್‌ ಎಂ ಎಸ್‌ ನೋಡಿ ಸುಧಾಮೂರ್ತಿ ಅವರೇ ಫೋನ್‌ ಮಾಡಿದ್ದರು. ಎಷ್ಟು ಜನರು ಸಂಕಷ್ಟದಲ್ಲಿದ್ದಾರೆ ಹಾಗೂ ಎಷ್ಟು ಕಿಟ್‌ ಗಳ ಅವಶ್ಯಕತೆ ಇದೆ ಎನ್ನುವುದನ್ನ ಸ್ವತಃ ಅವರೇ ವಿಚಾರಿಸಿಕೊಂಡರು.

ಲಾಕ್‌ಡೌನ್‌ ಸಂಧರ್ಬದಲ್ಲಿ 2 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ, ಕಾರ್ಮಿಕರಿಗೆ ಪ್ರತಿಷ್ಠಾನದ ವತಿಯಿಂದ ಕಿಟ್‌ ವಿತರಿಸಲಾಗಿತ್ತು. ಆ ವೇಳೆ ಅರ್ಹ ಕಲಾವಿದರಿಗೆ ಸಿಕ್ಕಿಲ್ಲ ಎನ್ನುವ ಮನವಿಯ ಹಿನ್ನಲೆಯಲ್ಲಿ ಇಂದು ಮತ್ತೆ ಒಂದು ಸಾವಿರ ಮಂದಿಗೆ ನೆರವು ನೀಡಲಾಗಿದೆ. ಚಲನಚಿತ್ರ ಕಾರ್ಮಿಕರು ಮತ್ತು ಕಲಾವಿದರು 17 ಸಂಘಟನೆಯ ಸದಸ್ಯರಿಗೆ ನೆರವು ನೀಡುವ ಮೂಲಕ ಕರೋನಾದಿಂದ ಕೆಲಸ ಸಿಗದೆ ಕಂಗಾಲಾಗಿರುವ ಕಲಾವಿದರಿಗೆ ಕಿಟ್‌ ವಿತರಿಸಲಾಗಿದೆ. ಲಾಕ್‌ ಡೌನ್‌ ಬಳಿಕ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿದ್ದರೂ ಕೆಲವೇ ಕೆಲವು ಕಲಾವಿದರನ್ನು ಚಿತ್ರೀಕರಣದಲ್ಲಿ ಬಳಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಕಲಾವಿದರು. ಕಾರ್ಮಿಕರು ಕೆಲಸವಿಲ್ಲದೆ ದೈನಂದಿನ ಬದುಕು ಸಾಗಿಸಲು ಪರದಾಡುತ್ತಿದ್ದಾರೆ. ಇಂತವರನ್ನು ಗುರುತಿಸಿ ನೆರವು ನೀಡಲು ಇನ್ಪೋಸಿಸ್‌ ಪ್ರತಿಷ್ಠಾನ ಮುಂದಾಗಿದ್ದು ಬಹಳ ಸಂತಸದ ವಿಷಯ ಎಂದು ಹೇಳಿದರು.

ನಿರ್ಮಾಪಕ ರಮೇಶ್‌ ರೆಡ್ಡಿ, ಹಾಸ್ಯ ಕಲಾವಿದ ಡಿಂಗ್ರಿ ನಾಗರಾಜ್‌ ಸೇರಿದಂತೆ ಕಾರ್ಯಕ್ರಮದಲ್ಲಿ ನೂರಾರು ಪೋಷಕ ಕಲಾವಿದರ ಭಾಗವಹಿಸಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author