day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮಂಗಳೂರಿನ ವಿವಿಧ ಬೀಚ್ ಪೊಲೀಸ್ ದಾಳಿ:ಅಮಲು ಪದಾರ್ಥ ವಶ ಹಲವರ ಬಂಧನ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಮಂಗಳೂರಿನ ವಿವಿಧ ಬೀಚ್ ಪೊಲೀಸ್ ದಾಳಿ:ಅಮಲು ಪದಾರ್ಥ ವಶ ಹಲವರ ಬಂಧನ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮಂಗಳೂರಿನ ವಿವಿಧ ಬೀಚ್ ಪೊಲೀಸ್ ದಾಳಿ:ಅಮಲು ಪದಾರ್ಥ ವಶ ಹಲವರ ಬಂಧನ

ಮಂಗಳೂರು:ಇಲ್ಲಿನ ವಿವಿಧ ಬೀಚಿನಲ್ಲಿ ಅಮಲು ಪದಾರ್ಥ ಸೇವಿಸುತ್ತಿದ್ದ ಹಲವರನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರ ಸೂಚನೆಯಂತೆ ನಿನ್ನೆ ಪೊಲೀಸರು ಹಠಾತ್ತನೇ ಬೀಚ್ ಪ್ರದೇಶಕ್ಕೆ ದಾಳಿ ಮಾಡಿ ಅಮಲು ಪದಾರ್ಥ ಸೇವಿಸುತ್ತಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಣಂಬೂರು,ಸೋಮೇಶ್ವರ, ತಣ್ಣೀರುಬಾವಿ ಮತ್ತು ಸುರತ್ಕಲ್ ಬೀಚ್​ಗಳಿಗೆ ರಾತ್ರಿ ವೇಳೆ ಏಕಕಾಲದಲ್ಲಿ ದಾಳಿ ಮಾಡಿದ ಪೊಲೀಸರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ 70 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ವೇಳೆ, ಕತ್ತಲಾದರೂ ಬೀಚ್​ಗಳಲ್ಲಿ ಅನಗತ್ಯ ತಿರುಗಾಡುವವರನ್ನು ವಿಚಾರಣೆ ನಡೆಸಲಾಯಿತು. ಈ ವೇಳೆ ಹಲವರಲ್ಲಿ ಮದ್ಯದ ಬಾಟಲಿಗಳು ಸಿಕ್ಕಿದೆ. ಸುಮಾರು 65 ಮಂದಿ ಮದ್ಯ ಸೇವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಬೀಚಿನಲ್ಲಿ ಪೊಲೀಸ್ ದಾಳಿ ಬೀಚ್​ನಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರ 17 ಬೈಕ್ ಮತ್ತು 7 ಕಾರುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದರಲ್ಲಿ 12 ಬೈಕ್ ಮತ್ತು 2 ಕಾರುಗಳಲ್ಲಿ ಹಳೆ ಪ್ರಕರಣಗಳು ಬಾಕಿಯಿದೆ. ಹತ್ತಕ್ಕಿಂತ ಹೆಚ್ಚು ಬೈಕ್​ಗಳಿಗೆ 10 ಕ್ಕಿಂತ ಹೆಚ್ಚಿನ ಪ್ರಕರಣಗಳು ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಬೀಚಿನಲ್ಲಿ ಪೊಲೀಸ್ ದಾಳಿ ಬೀಚ್​ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರ ದೂರಿನ ಆಧಾರದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಮಾರ್ಗದರ್ಶನದಲ್ಲಿ ಡಿಸಿಪಿ, ಎಸಿಸಿಗಳ ಮೇಲ್ವಿಚಾರಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್​ಗಳು ತಲಾ 20 ಪೊಲೀಸ್ ಸಿಬ್ಬಂದಿಗಳ‌ ತಂಡ ರಚಿಸಿ ಈ ದಾಳಿ ನಡೆಸಲಾಗಿತ್ತು. ವಶಕ್ಕೆ ತೆಗೆದುಕೊಂಡವರನ್ನು ಮಂಗಳೂರಿನ ಪುರಭವನದ ಸಭಾಂಗಣದಲ್ಲಿ ಕೂರಿಸಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಎಚ್ಚರಿಕೆ ನೀಡಿದರು.

ದಾಳಿಯ ವೇಳೆಯಲ್ಲಿ ಒಂದು ಗಾಂಜಾ ಪ್ರಕರಣ ಪತ್ತೆಯಾಗಿದೆ. ಗಾಂಜಾಕ್ಕೆ ಚಾಕಲೇಟ್ ಮಿಶ್ರಣ ಮಾಡಿ ಟ್ಯಾಬ್ಲೆಟ್ ರೀತಿ ಮಾಡಿ ಮಾರಾಟ ಮಾಡುತ್ತಿರುವ ಪ್ರಕರಣ ಪತ್ತೆಯಾಗಿದೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author