day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ೧೧ ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಡಿ.ಎಸ್.ಬಿ.ಜಿ ಕಾಲೇಜು ಸಭಾಂಗಣದಲ್ಲಿಆಚರಿಸಲಾಯಿತು#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

೧೧ ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಡಿ.ಎಸ್.ಬಿ.ಜಿ ಕಾಲೇಜು ಸಭಾಂಗಣದಲ್ಲಿಆಚರಿಸಲಾಯಿತು#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ೧೧ ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಡಿ.ಎಸ್.ಬಿ.ಜಿ ಕಾಲೇಜು ಸಭಾಂಗಣದಲ್ಲಿ ನೆಹರು ಯುವ ಕೇಂದ್ರ,ಚಿಕ್ಕಮಗಳೂರು, ರಾಜ್ಯಶಾಸ್ತ್ರ ವಿಭಾಗ ಮೂಡಿಗೆರೆ,ಮಾನವ ಹಕ್ಕುಗಳ ಒಕ್ಕೂಟ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ಆಚರಿಸಲಾಯಿತು. ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜನವರಿ 25 ರಂದು ‘ರಾಷ್ಟ್ರೀಯ ಮತದಾರರ ದಿನ’ ಆಚರಿಸಲಾಗುತ್ತಿದೆ. ಈ ಬಾರಿ ‘ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಚುನಾವಣಾ ಅರಿವು (Electoral Literacy for Stronger Democracy)’ ಎಂಬ ಧ್ಯೇಯವನ್ನಿಟ್ಟುಕೊಂಡು ಮತದಾರರ ದಿನ ಆಚರಿಸಲಾಗುತ್ತಿದೆ. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಸುದೇವ್ 1950ರ ಜನವರಿ 25 ಚುನಾವಣಾ ಆಯೋಗದ ಸಂಸ್ಥಾಪನಾ ದಿನವಾಗಿದೆ ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಯುವ ಮತದಾರರು ಚುನಾವಣಾ ಪಕ್ರಿಯೆಯಲ್ಲಿ ಭಾಗಿದಾರರಾಗಿ ಉತ್ತಮ‌ ಅಭ್ಯರ್ಥಿ ಆಯ್ಕೆಯಾಗುವಂತೆ ಪ್ರಜಾಪ್ರಭುತ್ವದಡಿಯಲ್ಲಿ ಮತದಾನದ ಹಕ್ಕು ವಲಾಯಿಸಬೇಕು ಎಂದು ನುಡಿದರು. ನಂತರ ಪ್ರಾಂಶುಪಾಲರಾದ ಬಸವಾರಜಪ್ಪ ಮಾತನಾಡಿ 25ರಂದು ‘ರಾಷ್ಟ್ರೀಯ ಮತದಾರರ ದಿನ’ ಆಚರಿಸಲಾಗುತ್ತಿದೆ. ಮೊದಲ ಬಾರಿ 2011ರಲ್ಲಿ ಆಚರಿಸಲಾಗಿತ್ತು. ಬಳಿಕ ಪ್ರತಿ ವರ್ಷ ಆಚರಿಸುತ್ತಾ ಬರಲಾಗಿದೆ. ಈ ವರ್ಷ 11ನೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾಲೇಜಿನ ಯುವ ವಿದ್ಯಾರ್ಥಿಗಳು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಂಡು ಕಾಲೇಜಿನ ಗಮನಕ್ಕೆ ತರಬೇಕು ತಪ್ಪಿದಲ್ಲಿ ಅವರ ಅಂತಾರಿಕ ಪರೀಕ್ಷೆಯ ೨ ಅಂಕಗಳನ್ನು ಕಾಲೇಜು ವತಿಯಿಂದ ತಡೆಹಿಡಿಯಲಾಗುವುದು ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಎಚ್ಚರಿಸಿ ಮಾತನಾಡಿದರು. ಮತದಾನಕ್ಕೆ ಅರ್ಹರಾದ ಯಾರೊಬ್ಬರು ಮತದಾನದಿಂದ ಹೊರಗುಳಿಯಬಾರದು ಎನ್ನುವ ನಿಟ್ಟಿನಲ್ಲಿ ಚುನಾವಣಾ ಆಯೋಗವು 18 ವರ್ಷ ತುಂಬಿದ ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸುತ್ತದೆ ಎಂದು ಕಾಲೇಜು ವತಿಯಿಂದ ರಾಜ್ಯಶಾಸ್ತ್ರ ಉಪನ್ಯಾಸಕರಾದ ನೌಷದ್ ಹಾಗೂ ದಯಾನಂದ ರವರು ಪ್ರತಿಜ್ಞಾ ವಿಧಿ ಬೋದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶಿವರಾಜ್,ದಯಾನಂದ ನೆಹರು ಯುವಕೇಂದ್ರದ ಕಾರ್ಯಕರ್ತರಾದ ನಾಜೀಮ್, ಪರಮೇಶ್, ಇಮ್ರಾನ್ ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author