day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಸಂವಿಧಾನದ ಆಶಯಗಳ ಈಡೇರಿಕೆಗಾಗಿ ಯುವಜನರು ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಸಶಕ್ತ ಭಾರತದ ನಿರ್ಮಾಣಕ್ಕೆ….#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಸಂವಿಧಾನದ ಆಶಯಗಳ ಈಡೇರಿಕೆಗಾಗಿ ಯುವಜನರು ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಸಶಕ್ತ ಭಾರತದ ನಿರ್ಮಾಣಕ್ಕೆ….#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಸಂವಿಧಾನದ ಆಶಯಗಳ ಈಡೇರಿಕೆಗಾಗಿ ಯುವಜನರು ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಸಧೃಡ ಸಶಕ್ತ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೆ.ಆರ್.ಪೇಟೆ ತಹಶೀಲ್ದಾರ್ ಎಂ.ಶಿವಮೂರ್ತಿ ಕರೆ ನೀಡಿದರು …

ಅವರು ಇಂದು ಕೆ.ಆರ್.ಪೇಟೆ ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ತಾಲ್ಲೂಕು ಕ್ರೀಡಾಂಗಣದಲ್ಲಿ 72ನೇ ಭಾರತ ಗಣರಾಜ್ಯೋತ್ಸವ ಸಮಾರಂಭದ ಅಂಗವಾಗಿ ರಾಷ್ಟ್ರಧ್ವಜಾರೋಹಣ ಮಾಡಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜ ಪಥಸಂಚಲನೆಯ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು…

ಭಾರತ ಗಣತಂತ್ರದ 72ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ನಾವು ದೇಶದ ಸಾರ್ವಭೌಮತೆ ಹಾಗೂ ಅಖಂಡತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ನಮ್ಮ ನಮ್ಮ ಪಾಲಿನ ಕೆಲಸಗಳನ್ನು ನಾವು ಬದ್ಧತೆಯಿಂದ ಕೆಲಸ ಮಾಡಬೇಕು. ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಅನಕ್ಷರತೆ ಹಾಗೂ ಭ್ರಷ್ಟಾಚಾರದ ನಿರ್ಮೂಲನೆಗೆ ಒಂದಾಗಿ ದುಡಿಯಬೇಕು. ಕೊರೋನಾ ಮಹಾಮಾರಿಯ ನಿಯಂತ್ರಣ ಮಾಡಲು ಕೋವ್ಯಾಕ್ಸಿನ್ ಲಸಿಕೆ ಪತ್ತೆಯಾಗಿದ್ದರೂ ನಾವು ಅಗತ್ಯ ಆರೋಗ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ ತಹಶೀಲ್ದಾರ್ ಶಿವಮೂರ್ತಿ ವಿಜ್ಞಾನ ತಂತ್ರಜ್ಞಾನದ ಅನುಷ್ಠಾನದಲ್ಲಿ ಭಾರತ ದೇಶವು ಸರ್ವಶ್ರೇಷ್ಠ ಸಾಧನೆ ಮಾಡಿದೆ. ಯುವಜನರು ವಿಜ್ಞಾನದ ತಂತ್ರಜ್ಞಾನದ ಫಲವನ್ನು ದೇಶದ ಅಭಿವೃದ್ಧಿಗೆ ಬಳಸಬೇಕು. ಅನಕ್ಷರತೆಯನ್ನು ಅಳಿಸಿಹಾಕಿ ಸಾಕ್ಷರತೆಯ ನವಸಮಾಜ ನಿರ್ಮಿಸಲು ಮುಂದಾಗಬೇಕು ಎಂದು ತಹಶಿಲ್ದಾರ್ ಶಿವಮೂರ್ತಿ ಕರೆ ನೀಡಿದರು …

ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀಸ್ವಾಮಿನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತಿ ಸದಸ್ಯ ರಾಮದಾಸು ಗಣರಾಜ್ಯೋತ್ಸವ ಸಂದೇಶ ನೀಡಿದರು..

ತಾಲ್ಲೂಕು ಪಂಚಾಯತಿ ಸ್ಥಾಯಿಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮಿ, ಸದಸ್ಯೆ ವಿನುತಾಸುರೇಶ್, ಸರ್ಕಲ್ ಇನ್ಸ್ ಪೆಕ್ಟರ್ ಎಂ.ಕೆ.ದೀಪಕ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ, ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಎಪಿಎಂಸಿ ಕಾರ್ಯದರ್ಶಿ ಸತೀಶ್, ನಿರ್ದೇಶಕ ಸ್ವಾಮಿಗೌಡ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಆರ್.ಎಸ್.ಶಿವರಾಮೇಗೌಡ, ತಾಲ್ಲೂಕು ನಯನಜ ಕ್ಷತ್ರಿಯ ಸಮಾಜದ ಅಧ್ಯಕ್ಷ ಡಾ.ಶಿವಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಜಗಧೀಶ್, ಸೆಸ್ಕ್ ಕಾರ್ಯಪಾಲಕ ಅಭಿಯಂತರ ನಾಗರಾಜು, ಬಿಸಿಎಂ ಅಧಿಕಾರಿ ವೆಂಕಟೇಶ್, ಗ್ರಾಮಾಂತರ ಠಾಣೆ ಎಸ್.ಐ ಸುರೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

ಪಟ್ಟಣ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಮತ್ತು ಪೋಲಿಸ್ ಸಿಬ್ಬಂಧಿಗಳು ಧ್ವಜವಂದನೆ ನೀಡಿದರು..

ಆರೋಗ್ಯ ಇಲಾಖೆಯು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ಹಾಗೂ ಕ್ವಿಜ್ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ ನಗಧು ಬಹುಮಾನ ಹಾಗೂ ಪ್ರಮಾಣಪತ್ರವನ್ನು ವಿತರಿಸಿದರು.

ವರದಿ.ಡಾ.ಕೆ.ಆರ್.ನೀಲಕಂಠ .

ಕೃಷ್ಣರಾಜಪೇಟೆ . ಮಂಡ್ಯ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author