day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಕೃಷಿ ರೈತರೊಬ್ಬರು ಸಾಲ ತೀರಿಸಲಾಗದೇ ನೇಣು ಬಿಗಿದು ಆತ್ಮಹತ್ಯೆ#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಕೃಷಿ ರೈತರೊಬ್ಬರು ಸಾಲ ತೀರಿಸಲಾಗದೇ ನೇಣು ಬಿಗಿದು ಆತ್ಮಹತ್ಯೆ#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ನಿಧನ ವಾರ್ತೆ…… ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಬಾಳೂರಿನ ಕೃಷಿ ರೈತರೊಬ್ಬರು ಸಾಲ ತೀರಿಸಲಾಗದೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಬಾಳೂರಿನ ಬಿ.ಸಿ.ತಿಲಕ್(61) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಧೈವಿ. ಬಾಳೂರು ಗ್ರಾಮದಲ್ಲಿ ತಿಲಕ್ ಅವರಿಗೆ 5 ಎಕರೆ, ಪತ್ನಿಯ ಹೆಸರಿನಲ್ಲಿ 5 ಎಕರೆ ಹಾಗೂ ಮಗಳ ಹೆಸರಲ್ಲಿ 4 ಎಕರೆ 27 ಗುಂಟೆ ಜಮೀನು ಹೊಂದಿದ್ದು ಈ ಜಮೀನಲ್ಲಿ ತಿಲಕ್ ಅವರೇ ಕೃಷಿ ಮಾಡಿಕೊಂಡಿದ್ದರು. ಈ ಜಮೀನಿನಲ್ಲಿ ಕಾಫಿ, ಕಾಳುಮೆಣಸು, ಅಡಿಕೆ, ಬಾಳೆ ಕೃಷಿ ಮಾಡಿಕೊಂಡಿದ್ದರು. ಕೃಷಿಗಾಗಿ ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೂ 3 ಲಕ್ಷ, ಪತ್ನಿ ಎಚ್.ಎ.ಆಶಾ ಅವರ ಹೆಸರಿನಲ್ಲಿ ರೂ2.5 ಲಕ್ಷ, ಮಗಳು ತಪಸ್ಯ ಅವರ ಹೆಸರಿನಲ್ಲಿ ರೂ 2.5 ಲಕ್ಷ ಮತ್ತು ಕೊಟ್ಟಿಗೆಹಾರ ಕರ್ನಾಟಕ ಗ್ರಾಮೀಣ ಬ್ಯಾಂಕ್‍ನಲ್ಲಿ 50 ಸಾವಿರ ಸಾಲ ಪಡೆದು ಕೃಷಿ ಮಾಡಿದ್ದರು. ಆದರೆ ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಅತಿವೃಷ್ಠಿಯಾಗಿ ಬೆಳೆ ಹಾನಿಯಾಗಿದ್ದು ಯಾವುದೇ ಫಸಲು ಕೈಗೆ ಸಿಗದೇ ಬ್ಯಾಂಕ್ ಸಾಲ ತೀರಿಸಲಾಗದೇ ಮನನೊಂದು ಶುಕ್ರವಾರ ಬೆಳಗ್ಗೆ ಮನೆಯ ಬಳಿ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಎಚ್.ಎ.ಆಶಾ ಬಾಳೂರು ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತ ನಿಧನಕ್ಕೆ ಸಂತಾಪ ಕೃಷಿ ರೈತರಾದ ಬಿ.ಸಿ.ತಿಲಕ್ ಅವರ ನಿಧನಕ್ಕೆ ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಳೂರು ಹಾಗೂ ಸಂಘದ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ವರದಿ. ಮಗ್ಗಲಮಕ್ಕಿಗಣೇಶ್. ಬ್ಯೂರೋ ನ್ಯೂಸ್.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author