day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ರಾಜ್ಯದ ಒಳಿತಿಗಾಗಿ ಜೆಡಿಎಸ್ ಗೆ ಮತ ನೀಡಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ರಾಜ್ಯದ ಒಳಿತಿಗಾಗಿ ಜೆಡಿಎಸ್ ಗೆ ಮತ ನೀಡಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ರಾಜ್ಯದ ಒಳಿತಿಗಾಗಿ ಜೆಡಿಎಸ್ ಗೆ ಮತ ನೀಡಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ

 

ಬೀದರ್ (ಏ.07): ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಬಡವರ ಪರ, ಶ್ರಮಿಕರ ಪರ, ರೈತರ ಪರವಾಗಿ ನಾವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದೇವು. ಮತ್ತೆ ನಾವು ಅಧಿಕಾರಕ್ಕೆ ಬಂದರೆ ರಾಜ್ಯದ ಒಳಿತಿಗಾಗಿ ಉತ್ತಮ ಯೋಜನೆಗಳನ್ನು ಜಾರಿಗೆ ತರುತ್ತೇವೆ. ರಾಜ್ಯದ ಒಳಿತಿಗಾಗಿ ಜೆಡಿಎಸ್ ಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿಗಳು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಹೆಚ್.ಡಿ ಕುಮಾರಸ್ವಾಮಿ ರವರು ಮನವಿ ಮಾಡಿದರು.

ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಟ್ಟಾ ಕೆ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಬಸವಕಲ್ಯಾಣ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ರವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಈ ಹಿಂದೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದೆ. ಈ ತಾಲೂಕಿನ ಕುಡಿಯುವ ನೀರಿಗಾಗಿ ಅನುದಾನ ಮೀಸಲಿಟ್ಟಿದ್ದೆ. ಈ ನಾಡಿನ ಬಡವರ ಪರವಾಗಿ ನಾವು ಉತ್ತಮವಾದ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ರೈತರಿಗೂ ಉತ್ತಮವಾದ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ.

ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ ನೀಡುವ ಯೋಚನೆ ನಮ್ಮಲ್ಲಿದೆ.‌ ಈ ಭಾರಿ ನಮ್ಮ ಅಭ್ಯರ್ಥಿಗೆ ಹೆಚ್ಚಿನ ಮತಗಳನ್ನು ನೀಡಿ ನಮ್ಮನ್ನು ಅಧಿಕಾರಕ್ಕೆ ತನ್ನಿ,  ನಾವು ಅಧಿಕಾರಕ್ಕೆ ಬಂದರೆ ಮುಂದಿನ ದಿನಗಳಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತೇವೆ. ಈ ಉಪಚುನಾವಣೆಯಲ್ಲಿ ನಮ್ಮನ್ನು ಅಧಿಕಾರಕ್ಕೆ ತಂದು ಸರ್ಕಾರಕ್ಕೆ ಬಿಸಿ ಮುಟ್ಟಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರವರು ಬಸವಕಲ್ಯಾಣ ಕ್ಷೇತ್ರದ ಜನರಲ್ಲಿ ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವರು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದು ರೈತರ ಸಾಲಮನ್ನಾ ಮಾಡಿದರು. ರೈತರಿಗಾಗಿ ನೀವು ಏನು ಮಾಡಿದ್ದಿರಿ ಎಂದು ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿ ಎಂದು ಕ್ಷೇತ್ರದ ಜನರಿಗೆ ತಿಳಿಸಿದರು. ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವಂತೆ ಕ್ಷೇತ್ರದ ಜನರಲ್ಲಿ ಇದೇ ವೇಳೆ ಮನವಿ ಮಾಡಿದರು.

ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಾಪೂರ ಸೇರಿದಂತೆ ಅನೇಕರು ಮಾತನಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯರ್ತರು ಸೇರಿದಂತೆ ಸಾವಿರಾರು ಜನರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author