day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಸ್ವರ್ಣ ಸಮೂಹ ಸಂಸ್ಥೆಗಳ ವತಿಯಿಂದ ಡಾ. ವಿ.ಎಸ್.ವಿ. ಪ್ರಸಾದ ಅವರು ಆಹಾರ ಧಾನ್ಯಗಳ ಕಿಟ್ ವಿತರಿಸಿದರು#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಸ್ವರ್ಣ ಸಮೂಹ ಸಂಸ್ಥೆಗಳ ವತಿಯಿಂದ ಡಾ. ವಿ.ಎಸ್.ವಿ. ಪ್ರಸಾದ ಅವರು ಆಹಾರ ಧಾನ್ಯಗಳ ಕಿಟ್ ವಿತರಿಸಿದರು#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಸ್ವರ್ಣ ಸಮೂಹ ಸಂಸ್ಥೆಗಳ ವತಿಯಿಂದ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಅವರು ನಗರದ ಪತ್ರಿಕಾ ವಿತರಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದರು. ಸ್ಟೇಶನ್ ರಸ್ತೆ ಸ್ವರ್ಣ ಪ್ಯಾರಡೈಸ್ ಹೋಟೆಲ್ ಆವರಣದಲ್ಲಿಂದು ಏರ್ಪಡಿಸಿದ ಸರಳ ಕಾರ್ಯಕ್ರಮದಲ್ಲಿ ಕಿಟ್ ನೀಡಿ ಮಾತನಾಡಿದ ಡಾ. ವಿ.ಎಸ್.ವಿ. ಪ್ರಸಾದ ಅವರು, ಕೋವಿಡ್ ಇಡಿ ಪ್ರಪಂಚಕ್ಕೆ ಬಂದಿರುವ ಸಮಸ್ಯೆ. ಕಳೆದ ವರ್ಷ ಲಾಕ್‌ಡೌನ್ ವೇಳೆಯಲ್ಲಿ ತಮ್ಮ ಕಂಪನಿ ವತಿಯಿಂದ ಪತ್ರಿಕಾ ವಿತರಕರು ಸೇರಿ ಕಷ್ಟದಲ್ಲಿರುವ ಅನೇಕರಿಗೆ ನೆರವು ನೀಡಲಾಗಿತ್ತು. ಈ ಸಲ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಬಹುವಾಗಿ ಕಾಡಿತು. ಹಲವರು ಸಕಾಲದಲ್ಲಿ ಆಮ್ಲಜನಕ ದೊರೆಯದೆ ಸಾವಿಗೀಡಾದರು. ಇಂಥ ಸಂದರ್ಭದಲ್ಲಿ ಸ್ವರ್ಣ ಸಮೂಹ ಸಂಸ್ಥೆ ಜರ್ಮನಿಯಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ಆಮದು ಮಾಡಿಕೊಂಡು ರೈಲ್ವೆ ಆಸ್ಪತ್ರೆ, ಕಿಮ್ಸ್, ಕ್ಷಮತಾ ಸಂಸ್ಥೆ ಸೇರಿ ಅಗತ್ಯವಿರುವಲ್ಲಿಗೆ ವಿತರಿಸಿದೆ. ಕಿಮ್ಸ್ಗೆ ನೂರು ಮಂಚ, ಹಾಸಿಗೆ ಇತ್ಯಾದಿ ಅಗತ್ಯ ಪರಿಕರಗಳನ್ನು ಕೊಡಲಾಗಿದೆ. ಪೊಲೀಸರು, ಇತರ ಅನೇಕರಿಗೆ ಮಾಸ್ಕ್, ಸ್ಯಾನಿಟೈಸರ್‌ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಲಾಕ್‌ಡೌನ್ ಎಂದು ಎಲ್ಲರೂ ಮನೆಯಲ್ಲಿ ಕುಳಿತಿರುವಾಗ ಪತ್ರಿಕಾ ವಿತರಕರು ಮನೆ ಮನೆಗೆ ಪತ್ರಿಕೆ ತಲುಪಿಸುತ್ತಿದ್ದಾರೆ. ಕೋವಿಡ್ ಆತಂಕದ ಮಧ್ಯೆಯೂ ನಿಷ್ಠೆಯಿಂದ ಕಾಯಕ ಮಾಡುತ್ತಿರುವವರಿಗೆ ನೆರವು ನೀಡುವುದು ನಮ್ಮ ಧರ್ಮ ಎಂದು ಭಾವಿಸಿದ್ದೇವೆ. ಹೀಗಾಗಿ, ಅಕ್ಕಿ, ಗೋಧಿ ಹಿಟ್ಟು, ತೊಗರಿಬೇಳೆ, ರವಾ, ಸಕ್ಕರೆ, ಖಾದ್ಯ ತೈಲ, ಉಪುö್ಪ ಸೇರಿ ಪ್ರತಿ ಕುಟುಂಬಕ್ಕೆ ೧೦-೧೫ ದಿನಗಳಿಗೆ ಆಗುವಷ್ಟು ಆಹಾರ ಧಾನ್ಯಗಳಿರುವ ೩೫೦ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ. ಭಗವಂತ ಕೊಟ್ಟಿದ್ದರಲ್ಲಿ ಒಂದು ಭಾಗವನ್ನು ಸಮಾಜಕ್ಕೆ ನೀಡಬೇಕು ಎಂಬ ಭಾವನೆಯಿಂದ ಸೇವೆ ಮಾಡುತ್ತಿದ್ದೇವೆ ಎಂದರು.

Navachaitanya Old Age Home

Career | job

About Author