day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ರೈತರಿಗೆ ಪಿಕ್ ಅಪ್ ವಾಹನ ಖರೀದಿಸಲು ಶೇಕಡಾ 4ರ ಬಡ್ಡಿ ದರದಲ್ಲಿ 7ಲಕ್ಷದವರೆಗೆ ಸಾಲ : ಹಳಸೆ ಶಿವಣ್ಣ.” – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

“ರೈತರಿಗೆ ಪಿಕ್ ಅಪ್ ವಾಹನ ಖರೀದಿಸಲು ಶೇಕಡಾ 4ರ ಬಡ್ಡಿ ದರದಲ್ಲಿ 7ಲಕ್ಷದವರೆಗೆ ಸಾಲ : ಹಳಸೆ ಶಿವಣ್ಣ.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ತಮ್ಮ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಪಿಕ್ ಅಪ್ ವಾಹನ ಖರೀದಿಸಲು ಬಯಸುವ ರೈತರಿಗೆ ಪಿ.ಸಿ.ಎ.ಆರ್.ಡಿ. ಬ್ಯಾಂಕ್ ವತಿಯಿಂದ ಶೇಕಡಾ 4 ಬಡ್ಡಿಯಲ್ಲಿ ರೂ. 7 ಲಕ್ಷದ ವರೆಗೆ ಸಾಲ ಸೌಲಭ್ಯ ವಿತರಿಸಲಾಗುವುದು ಎಂದು ಮೂಡಿಗೆರೆ ಪಿ.ಸಿ.ಎ.ಆರ್.ಡಿ. ಬ್ಯಾಂಕ್ ಅಧ್ಯಕ್ಷ, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಹಳಸೆ ಶಿವಣ್ಣ ತಿಳಿಸಿದ್ದಾರೆ.

 

ಅವರು ಈ ಬಗ್ಗೆ ವಾಹಿನಿಗೆ ಮಾಹಿತಿ ನೀಡಿದ್ದು, ಸರ್ಕಾರವು ಪಶ್ಚಿಮಘಟ್ಟದ ಸಾಲುಗಳಲ್ಲಿ ಬರುವ ಗುಡ್ಡಗಾಡು ಪ್ರದೇಶದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ ಮತ್ತು ಉಡುಪಿ ಜಿಲ್ಲೆಗಳ ರೈತರಿಗೆ ಈ ಯೋಜನೆಯನ್ನು ಜಾರಿಗೆ ತಂದಿದೆ.

ಜಿಲ್ಲೆಗಳ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಿಸಲು, ಕೃಷಿ ಕಾರ್ಯಗಳಿಗೆ ಪೂರಕವಾದ ಕೆಲಸಗಳ ಅನುಕೂಲಕ್ಕಾಗಿ ಪಿಕ್ ಅಪ್ ವಾಹನಗಳನ್ನು ಖರೀದಿಸಲು ಸರ್ಕಾರ ಪ್ರೋತ್ಸಾಹದ ರೂಪದಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಹಿಂದೆ ಈ ಯೋಜನೆ ಜಾರಿಯಲ್ಲಿತ್ತಾದರೂ 2010ರಿಂದ ಯೋಜನೆ ಸ್ಥಗಿತಗೊಂಡಿತ್ತು. ಇದೀಗ ರೈತರ ಮತ್ತು ಸಹಕಾರಿಗಳ ಹೋರಾಟದ ಫಲವಾಗಿ ಈ ಯೋಜನೆ ಮತ್ತೆ ಜಾರಿಗೆ ಬಂದಿದೆ.

 

ಈ ಯೋಜನೆಯು ರೈತಾಪಿ ವರ್ಗದವರಿಗೆ ಮಾತ್ರ ಅನ್ವಯವಾಗುತ್ತದೆ. ವಿಶೇಷವಾಗಿ ಕಾಫಿ, ಅಡಿಕೆ ಬೆಳೆಯುವ ಪ್ರದೇಶಗಳ ರೈತರಿಗೆ ಪಿಕಪ್ ವಾಹನದ ಅವಶ್ಯಕತೆ ತುಂಭಾ ಇರುತ್ತದೆ. ಆರ್ಥಿಕ ಹೊರೆ ಮತ್ತು ಅಧಿಕ ಬಡ್ಡಿಯಿಂದ ರೈತರು ಇದುವರೆಗೂ ಪಿಕ್ ಅಪ್ ವಾಹನ ಖರೀದಿಸಲು ಹಿಂದೇಟು ಹಾಕುವಂತಾಗಿತ್ತು.

ಇದೀಗ ರೈತರಿಗೆ ಒಂದು ಸುವರ್ಣ ಅವಕಾಶ ದೊರಕಿದೆ. ಶೇಕಡಾ 4ರ ಬಡ್ಡಿಯಲ್ಲಿ ರೂ. 7 ಲಕ್ಷದ ವರೆಗೆ ಸಾಲ ಸೌಲಭ್ಯವನ್ನು ನೀಡಲಿದ್ದು, ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಳಸೆ ಶಿವಣ್ಣ ಅವರು ಮನವಿ ಮಾಡಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗೆ ತಮ್ಮ ತಮ್ಮ ತಾಲ್ಲೂಕು ವ್ಯಾಪ್ತಿಯ ಪಿ.ಸಿ.ಎ.ಆರ್.ಡಿ. ಬ್ಯಾಂಕ್ ಗಳ ಶಾಖೆಗೆ ಭೇಟಿ ನೀಡಿ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *