day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಹೃದಯಾಘಾತದಿಂದ ಮಹಿಳೆ ಸಾವು : ಆಸ್ಪತ್ರೆಯಲ್ಲಿ ಚಿನ್ನದ ಬಳೆ ಕಳವು.” – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

“ಹೃದಯಾಘಾತದಿಂದ ಮಹಿಳೆ ಸಾವು : ಆಸ್ಪತ್ರೆಯಲ್ಲಿ ಚಿನ್ನದ ಬಳೆ ಕಳವು.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಹೃದಯಾಘಾತವಾಗಿದ್ದ ಮಹಿಳೆಯೋರ್ವರನ್ನು ಆಸ್ಪತ್ರೆಗೆ ತಂದಾಗ ಅವರು ಮೃತಪಟ್ಟಿದ್ದು, ಮೃತದೇಹವನ್ನು ಆಸ್ಪತ್ರೆಯಿಂದ ಹೊರತಂದಾಗ ಅವರ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳು ಕಾಣೆಯಾಗಿವೆ ಎಂದು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಮೂಡಿಗೆರೆ ತಾಲ್ಲೂಕಿನ ತಳವಾರ ಗ್ರಾಮದ ಶಮಂತ್ ಎಂಬುವವರು ಮೂಡಿಗೆರೆ ಠಾಣೆಗೆ ದೂರು ನೀಡಿದ್ದಾರೆ.

ಅವರು ತಮ್ಮ ದೂರಿನಲ್ಲಿ ; ದಿನಾಂಕ 23-10-2023 ರಂದು ತಳವಾರದ ನಮ್ಮ ಮನೆಯಲ್ಲಿ ಕಾರ್ಯಕ್ರಮವಿದ್ದ ಕಾರಣ ನನ್ನ ಆಪ್ತ ಸ್ನೇಹಿತರಾದ ಶೇಖರ್ ಮತ್ತು ಅವರ ಹೆಂಡತಿ ಅನಿತ, ತಾಯಿ ಲಕ್ಷ್ಮಿದೇವಿ ಹಾಗೂ ಅವರ ಕುಟುಂಬದವರೊಂದಿಗೆ ನನ್ನ ಮನೆಗೆ ಬಂದಿರುತ್ತಾರೆ. ಮರುದಿನ ದಿನಾಂಕ 24-10-2023 ರಂದು ಬೆಳಿಗ್ಗೆ 06-00 ಗಂಟೆಯ ಸಮಯದಲ್ಲಿ ಲಕ್ಷ್ಮಿದೇವಿಯವರಿಗೆ ತೀವ್ರವಾಗಿ ಹೃದಯಾಘಾತವಾದ ಕಾರಣ ಶೇಖರ್ ರವರ ಕಾರಿನಲ್ಲಿ ನಾನು, ಅನಿತ, ಕೆಂಪರಾಜು ರವರು ತಳವಾರದಿಂದ ಮೂಡಿಗೆರೆ ಎಂ.ಜಿ.ಎಂ ಸರ್ಕಾರಿ ಆಸ್ಪತ್ರೆಗೆ ಸುಮಾರು 06-30 ಗಂಟೆ ಸಮಯಕ್ಕೆ ಕರೆದುಕೊಂಡು ಬಂದಿರುತ್ತೇವೆ. ನಂತರ ಆಸ್ವತ್ರೆಯ ಸಿಬ್ಬಂದಿಗಳು ತಕ್ಷಣ ಅವರನ್ನು ತುರ್ತು ಚಿಕಿತ್ಸಾ ವಿಭಾಗದ ರೂಂಮಿನ ಒಳಗೆ ತಪಾಸಣೆ ನಡೆಸಲು ಕರೆದುಕೊಂಡು ಹೋಗಿರುತ್ತಾರೆ, ತುರ್ತು ಚಿಕಿತ್ಸಾ ವಿಭಾಗದ ರೂಂಮಿನ ಒಳಗೆ ಕರೆದುಕೊಂಡು ಹೋಗುವಾಗ ಲಕ್ಷ್ಮಿ ದೇವಿಯವರ ಎರಡೂ ಕೈಗಳಲ್ಲಿ ತಲಾ ಎರಡರಂತೆ ಒಟ್ಟು ನಾಲ್ಕು ಚಿನ್ನದ ಬಳೆಗಳು ಧರಿಸಿದ್ದರು.

ಹಿಂದಿನ ದಿನ ನಮ್ಮ ಮನೆಯ ಕಾರ್ಯಕ್ರಮದಲ್ಲಿ ತೆಗೆದ ಪೊಟೊದಲ್ಲಿಯೂ ಸಹ ಲಕ್ಷ್ಮಿದೇವಿಯವರ ಎರಡೂ ಕೈಗಳಲ್ಲಿ ತಲಾ ಎರಡರಂತೆ ಒಟ್ಟು ನಾಲ್ಕು ಚಿನ್ನದ ಬಳೆಗಳು ಧರಿಸಿರುವುದು ಕಂಡು ಬಂದಿರುತ್ತದೆ. ಬೆಳಿಗ್ಗೆ 06-30 ಗಂಟೆಯ ಸಮಯದಲ್ಲಿ ನಾವುಗಳು ಬಂದಾಗ ಆಸ್ವತ್ರೆಯ ಸಿಬ್ಬಂದಿಗಳು ಲಕ್ಷ್ಮಿದೇವಿರವರನ್ನು ಚಿಕಿತ್ಸೆಗೆಂದು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದುಕೊಂಡು ಹೋಗುವ ಸಮಯದಲ್ಲಿ ಅವರ ಎರಡು ಕೈಗಳಲ್ಲಿ ನಾಲ್ಕು ಬಳೆಗಳು ಇರುವುದನ್ನು ನಾವು ಗಮನಿಸಿರುತ್ತೇವೆ. ನಂತರ ವೈದ್ಯರು ಪರೀಕ್ಷಿಸಿ ಲಕ್ಷ್ಮಿದೇವಿಯವರು ಮೃತಪಟ್ಟಿರವುದಾಗಿ ತಿಳಿಸಿದ್ದು, ಮೃತದೇಹವನ್ನು ತುರ್ತು ಚಿಕಿತ್ಸಾ ವಿಭಾಗದಿಂದ ಹೊರಗಡೆ ತೆಗೆದುಕೊಂಡು ಬರುವ ಸಮಯದಲ್ಲಿ ಅನಿತ, ಕೆಂಪರಾಜು ಮತ್ತು ನಾನು ಮೃತದೇಹವನ್ನು ನೋಡಿದಾಗ ಲಕ್ಷ್ಮಿದೇವಿಯ ಎರಡು ಕೈಗಳಲ್ಲಿ ಒಂದೊಂದು ಬಳೆಗಳು ಮಾತ್ರ ಇರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಲಕ್ಷ್ಮಿದೇವಿಯವರ ಸೊಸೆ ಅನಿತಾ ರವರು ಆಸ್ವತ್ರೆಯ ಸಿಬ್ಬಂದಿಗಳನ್ನು ವಿಚಾರ ಮಾಡಿದಾಗ ನಮಗೆ ಗೊತ್ತಿಲ್ಲವೆಂದು ತಿಳಿಸಿರುತ್ತಾರೆ.

ಆದ್ದರಿಂದ ಲಕ್ಷ್ಮಿದೇವಿಯವರ ಕೈಯಲ್ಲಿದ್ದ ನಾಲ್ಕು ಚಿನ್ನದ ಬಳೆಗಳಲ್ಲಿ ಎರಡು ಚಿನ್ನದ ಬಳೆಗಳನ್ನು ತುರ್ತು ಚಿಕಿತ್ಸಾ ವಿಭಾಗದ ಒಳಗೆ ಯಾರೋ ಕಳವು ಮಾಡಿರುವ ಬಗ್ಗೆ ಅನುಮಾನವಿರುತ್ತದೆ. ಸದರಿ ಎರಡು ಚಿನ್ನದ ಬಳೆಗಳು ಸುಮಾರು 35 ರಿಂದ 40 ಗ್ರಾಂ ತೂಕವಿರುವುದಾಗಿ ಲಕ್ಷ್ಮಿ ದೇವಿಯವರ ಮಗನಾದ ಶೇಖರ್ ರವರು ತಿಳಿಸಿರುತ್ತಾರೆ. ಅವುಗಳ ಒಟ್ಟು ಬೆಲೆ ಸುಮಾರು 2 ಲಕ್ಷ ರೂಪಾಯಿಗಳಾಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಆಸ್ಪತ್ರೆಯ ಸಿಬ್ಬಂದಿಗಳನ್ನು ವಿಚಾರಣೆ ಮಾಡಿ, ಸಿ ಸಿ ಕ್ಯಾಮರ ವನ್ನು ಪರಿಶೀಲಿಸಿ, ಕಳುವಾದ ಚಿನ್ನದ ಬಳೆಗಳನ್ನು ಪತ್ತೆ ಮಾಡಿಕೊಡಬೇಕಾಗಿ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿರುತ್ತಾರೆ.

ಈ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *