day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಲೋಕಸಭಾ ಟಿಕೆಟಿಗೆ ಲಾಬಿ : ಸುಧೀರ್ ಕುಮಾರ್ ಮುರೋಳ್ಳಿ ಪರ ಕಿಮ್ಮನೆ ರತ್ನಾಕರ್ ಮತ್ತು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಸೇರಿದಂತೆ ಅನೇಕ ಹಿರಿಯ ಮುಖಂಡರ ಬ್ಯಾಟಿಂಗ್.” – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

“ಲೋಕಸಭಾ ಟಿಕೆಟಿಗೆ ಲಾಬಿ : ಸುಧೀರ್ ಕುಮಾರ್ ಮುರೋಳ್ಳಿ ಪರ ಕಿಮ್ಮನೆ ರತ್ನಾಕರ್ ಮತ್ತು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಸೇರಿದಂತೆ ಅನೇಕ ಹಿರಿಯ ಮುಖಂಡರ ಬ್ಯಾಟಿಂಗ್.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಟಿಕೆಟ್ ಗಾಗಿ ಸಾಕಷ್ಟು ಆಕಾಂಕ್ಷಿಗಳು ಇದ್ದು ಇದೀಗ ಕೆಪಿಸಿಸಿಯ ರಾಜ್ಯ ವಕ್ತಾರರರಾಗಿರುವ, ಸಾಮಾಜಿಕ ಚಿಂತಕ, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿಗೆ ಟಿಕೆಟ್‌ ನೀಡಬೇಕೆಂದು ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಸೇರಿದಂತೆ ಹಿರಿಯ ಮುಖಂಡರು ಬೆಂಗಳೂರಿನಲ್ಲಿ ಲಾಬಿ ಆರಂಭಸಿದ್ದಾರೆ.

ದಿನಾಂಕ 05/03/2024ರ ಮಂಗಳವಾರ ಹಲವು ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಸುಧೀರ್ ಕುಮಾರ್ ಮುರೊಳ್ಳಿಗೇ ಟಿಕೆಟ್‌ ನೀಡಿ ಎಂದು ಮನವಿ ಮಾಡಿದ್ದಾರೆ.

ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,ವಿನಯ್ ಕುಮಾರ್ ಸೊರಕೆ,ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ಕಾರ್ಕಳದ ಉದಯ್ ಕುಮಾರ್ ಶೆಟ್ಟಿ,ಕುಂದಾಪುರದ ದಿನೇಶ್ ಹೆಗ್ಡೆ,ಉಡುಪಿಯ ರಮೇಶ್ ಕಾಂಚನ್,ಉಡುಪಿ ಜಿಲ್ಲಾ ಎನ್.ಎಸ್‌.ಯು.ಐ ಅಧ್ಯಕ್ಷ ಸೌರವ್ ಬಲ್ಲಾಳ್,ದೀಪಕ್ ಕೋಟ್ಯಾನ್ ಉಡುಪಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಉಮಾ ಐ.ಬಿ.ಶಂಕರ್,ಲಕ್ಷ್ಮೀಶ್ ಗಬ್ಬಲಡ್ಕ,ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಅಸಗೋಡು ನಾಗೇಶ್, ಚನ್ನಗಿರಿ ಗೌಡ, ಕುಕ್ಕುಡಿಗೆ ರವೀಂದ್ರ,ಮಲೆನಾಡು ಕರಾವಳಿ ಜನಪರ ಒಕ್ಕೂಟದ ಸಂಚಾಲಕ ಅನಿಲ್ ಹೊಸಕೊಪ್ಪ,ಪ್ರವೀಣ್ ಹೊಳೆಕೊಪ್ಪ,ವಿಜಯತೇಜ್ ಶೆಟ್ಟಿ,ಸಂದೇಶ್ ಕೊಪ್ಪ,ಶ್ರೀಜಿತ್ ದಂಡಿನಮಕ್ಕಿ ದುರ್ಗಾ ಚರಣ್ ಕುಂಚೂರು ಸೇರಿದಂತೆ 50 ಕ್ಕೂ ಹೆಚ್ಚು ಪ್ರಮುಖ ನಾಯಕರು ಈ ನಿಯೋಗದಲ್ಲಿದ್ದರು.

ನಮ್ಮ ಮಲೆನಾಡು ಕರಾವಳಿಯ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಿರುವ ಹಾಗೂ ಇಲ್ಲಿಯ ಸ್ಥಳೀಯ ಸಮಸ್ಯೆಗಳಿಗೆ ಹೋರಾಟ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ವಕ್ತಾರರಾಗಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಈ ಬಾರಿ ಅವರ ಪಕ್ಷದಿಂದ ಟಿಕೆಟ್ ನೀಡಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಅವರಿಗೆ ಪಕ್ಷ ಟಿಕೆಟ್‌ ನೀಡಿದಲ್ಲಿ ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರ ಮರಳಿ ಪಕ್ಷದ ಹಿಡಿತಕ್ಕೆ ಸಿಕ್ಕುವುದರಲ್ಲಿ ಅನುಮಾನವಿಲ್ಲ ಎಂದು ಮಲೆನಾಡು ಕರಾವಳಿ ಜನಪರ ಒಕ್ಕೂಟದ ಸಂಚಾಲಕ ಅನಿಲ್ ಹೊಸಕೊಪ್ಪ ಹೇಳಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *