day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಹೇಮಾವತಿ ನದಿ ಉಗಮ ಸ್ಥಾನ ಅಭಿವೃದ್ಧಿಪಡಿಸಿ, ಹೇಮಾವತಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ಹೇಮಾವತಿ ನದಿ ಉಗಮ ಒಕ್ಕೂಟದ ಒತ್ತಾಯ* . – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಹೇಮಾವತಿ ನದಿ ಉಗಮ ಸ್ಥಾನ ಅಭಿವೃದ್ಧಿಪಡಿಸಿ, ಹೇಮಾವತಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ಹೇಮಾವತಿ ನದಿ ಉಗಮ ಒಕ್ಕೂಟದ ಒತ್ತಾಯ* .

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಹೇಮಾವತಿ ನದಿ ಉಗಮ ಸ್ಥಾನ ಅಭಿವೃದ್ಧಿಪಡಿಸಿ, ಹೇಮಾವತಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ಹೇಮಾವತಿ ನದಿ ಉಗಮ ಒಕ್ಕೂಟದ ಒತ್ತಾಯ* .

ಹೇಮಾವತಿ ನದಿ ಉಗಮ ಹಿತರಕ್ಷಣಾ ಒಕ್ಕೂಟದ ಸಭೆಯು ಕೆ.ಆರ್.ಪೇಟೆಪಟ್ಟಣದಲ್ಲಿ ಇಂದು ಹೋರಾಟಗಾರ ವಿಠಲಾಪುರ ಸುಬ್ಬೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಹೇಮಾವತಿ ನದಿ ಉಗಮ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಮಾತನಾಡಿ ಜೀವನದಿ ಕಾವೇರಿಯ ಪ್ರಮುಖ ಉಪನದಿಯಾಗಿರುವ ಹೇಮಾವತಿಯು ಪಶ್ಚಿಮ ಘಟ್ಟದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿಯಲ್ಲಿ ಹುಟ್ಟಿ 250ಕಿ.ಲೋ.ಮೀಟರ್ ಗೂ ಹೆಚ್ಚು ಉದ್ದವಾಗಿ ಹರಿದು ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಕೊಡಗು, ತುಮಕೂರು ಸೇರಿದಂತೆ 06ಜಿಲ್ಲೆಗಳ ಭೂಮಿಯನ್ನು ಬಂಗಾರದ ಭೂಮಿಯನ್ನಾ ಗಿಸಿರುವ ಹೇಮಾವತಿ ನದಿ ಹಾಗೂ ನದಿಯ ಉಗಮ ಸ್ಥಾನವನ್ನು ಅಭಿವೃದ್ಧಿಪಡಿಸದೆ ನಿರ್ಲಕ್ಷ್ಯ ಮಾಡಲಾಗಿದೆ. ಆದ್ದರಿಂದ 06ಜಿಲ್ಲೆಗಳ ವ್ಯಾಪ್ತಿಯ ರೈತರ ಒಕ್ಕೂಟವನ್ನು ರಚಿಸಿಕೊಂಡು ನದಿಯ ಮೂಲವಾದ ಜಾವಳಿಯನ್ನು ತೀರ್ಥ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸುವ ಜೊತೆಗೆ ಕಾವೇರಿ ನದಿಯ ಉಗಮ ಸ್ಥಳವಾದ ಭಾಗಮಂಡಲದ ತಲ ಕಾವೇರಿಯನ್ನು ಅಭಿವೃದ್ಧಿ ಪಡಿಸಿದಂತೆ ಹೇಮಾವತಿ ನಂದಿಮೂಲ ಜಾವಳಿಯನ್ನು ಅಭಿವೃದ್ಧಿಪಡಿಸಲು ಹೇಮಾವತಿ ನದಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಸರ್ಕಾರದ ಮೇಲೆ ಒತ್ತಡ ಹಾಕಲು ನದಿ ಉಗಮ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಬಿ. ಆರ್. ಬಾಲಕೃಷ್ಣ ಅವರ ನೇತೃತ್ವದಲ್ಲಿ ಹೋರಾಟ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಹೇಮಾವತಿ ನದಿಯ ಉಗಮ ಸ್ಥಾನವಾದ ಜಾವಳಿಯನ್ನು ತೀರ್ಥ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರವು ಪ್ರಾಧಿಕಾರವನ್ನು ರಚಿಸಿ ಸಭಾಭವನ, ಅತಿಥಿ ಗೃಹ, ಶುದ್ಧಗಂಗಾ ಕುಡಿಯುವ ನೀರಿನ ಘಟಕದ ಸ್ಥಾಪನೆ, ರಸ್ತೆಗಳ ಅಗಲೀಕರಣ, ಹೇಮಾವತಿ ಮತ್ತು ಸೋಮಾವತಿ ಉಧ್ಯಾನವನಗಳ ನಿರ್ಮಾಣ, ಸಾರಿಗೆ ವ್ಯವಸ್ಥೆ, ಕೆರೆಗಳ ಹೂಳೆತ್ತುವುದು, ಹೇಮಾವತಿ ಹೆಬ್ಬಾಗಿಲು ಮತ್ತು ಪ್ರತಿಮೆ ನಿರ್ಮಾಣ, ಮಹಾಗಣಪತಿ ದೇವಸ್ಥಾನ ಅಭಿವೃದ್ಧಿ ಸೇರಿದಂತ 06ಜಿಲ್ಲೆಗಳಲ್ಲಿ ಪ್ರತಿ ವರ್ಷವೂ ಹೇಮಾದ್ರಿ ಉತ್ಸವ ಆಯೋಜಿಸಿ ಕಲೆ, ಸಂಸ್ಕೃತಿ, ಸಾಹಿತ್ಯದ ಸಮ್ಮಿಲನ ಕಾರ್ಯಕ್ರಮ ಆಯೋಜಿಸುವುದು ಸೇರಿದಂತೆ ಹೇಮಾವತಿ ಪ್ರತಿಮೆಯೊಂದಿಗೆ ನದಿಯ ಕುರಿತ ಸಾಕ್ಷ ಚಿತ್ರದ ವಾಹನದ ಸಂಚಾರಿ ಪ್ರದರ್ಶನ ನಡೆಸಿ ನದಿಯ ಬಗ್ಗೆ ಜಾಗೃತಿ ಮೂಡಿಸಲು ಅಗತ್ಯವಾದ ಹೇಮಾವತಿ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಸಭೆಯ ಅಧ್ಯಕ್ಷತೆ ವಹಿಸಿದ್ದ ಸುಬ್ಬಗೌಡರ ಅಧ್ಯಕ್ಷ ತೆಯಲ್ಲಿ ನಿರ್ಧರಿಸಲಾಯಿತು.
ರಾಜ್ಯ ಗೃಹಮಂಡಳಿ ಮಾಜಿ ಅಧ್ಯಕ್ಷ ಹಾಲಪ್ಪಗೌಡ, ಹೋರಾಟ ಸಮಿತಿಯ ಕಾರ್ಯದರ್ಶಿ ಎಂ.ವಿ. ಜಗಧೀಶ್, ನಿರ್ದೇಶಕರಾದ ಟಿ. ಪಿ.ಸುರೇಂದ್ರ, ಬಿ.ಎಂ.ಸುರೇಶ್, ಶಶಿಧರ್, ಮನೋಹರ್, ಅನಂತ್, ಸಮಾಜ ಸೇವಕ ಮಲ್ಲಿಕಾರ್ಜುನ, ಹಿರಿಯ ಪತ್ರಕರ್ತರಾದ ಹರಿಚರಣತಿಲಕ್, ಬಳ್ಳೇಕೆರೆ ಮಂಜುನಾಥ್, ಕೆ.ಆರ್.ನೀಲಕಂಠ, ಬಲ್ಲೇನಹಳ್ಳಿ ಮಂಜುನಾಥ್, ಬಸವರಾಜು ಸಭೆಯಲ್ಲಿ ಮಾತನಾಡಿದರು.
ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ನಾರಾಯಣಗೌಡ, ಮುಖಂಡರಾದ ರಾಮಸ್ವಾಮಿ, ದೇವೇಗೌಡ, ರಾಜಶೇಖರ್ ಸೇರಿದಂತೆ ನೂರಾರು ಪ್ರಗತಿಪರ ರೈತರು ಸಭೆಯಲ್ಲಿ ಭಾಗವಹಿಸಿದ್ದರು.
*ವರದಿ.ಡಾ.ಕೆ.ಆರ್.ನೀಲಕಂಠ* ,
*ಕೃಷ್ಣರಾಜಪೇಟೆ, ಮಂಡ್ಯ* .

About Author

Leave a Reply

Your email address will not be published. Required fields are marked *