day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಎಸ್.ಸಿ,ಎಸ್.ಟಿ ಸಮುದಾಯದ ಕಡೆಗಣನೆ ಮಾಡಿದ ಕೈ ಸರ್ಕಾರ : ಸಚಿನ್ ಬಾನಹಳ್ಳಿ ಟೀಕೆ.” – AVIN TV

लाइव कैलेंडर

September 2024
M T W T F S S
 1
2345678
9101112131415
16171819202122
23242526272829
30  

AVIN TV

Latest Online Breaking News

“ಎಸ್.ಸಿ,ಎಸ್.ಟಿ ಸಮುದಾಯದ ಕಡೆಗಣನೆ ಮಾಡಿದ ಕೈ ಸರ್ಕಾರ : ಸಚಿನ್ ಬಾನಹಳ್ಳಿ ಟೀಕೆ.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮೂಡಿಗೆರೆ (Mudigere) : ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರಕಾರ ಎಸ್.ಸಿ,ಎಸ್.ಟಿ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಬಿಜೆಪಿ ಎಸ್.ಸಿ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಸಚಿನ್ ಬಾನಹಳ್ಳಿ ಹೇಳಿದರು.

ಅವರು ದಿನಾಂಕ 23/07/2024ರ ಮಂಗಳವಾರ ನಮ್ಮ ವಾಹಿನಿಯೊಂದಿಗೆ ಮಾತನಾಡಿ,ಬಿಜೆಪಿ ಸರಕಾರ ಎಸ್.ಸಿ,ಎಸ್.ಟಿ ಸಮುದಾಯ ಮಾತ್ರವಲ್ಲ ತಾರತಮ್ಯ ಮಾಡದೇ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸಿದೆ.ಆದರೆ ಕಾಂಗ್ರೆಸ್ ಸರಕಾರ ಎಸ್.ಸಿ,ಎಸ್.ಟಿ ಸಮುದಾಯದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದೇ ಎಸ್.ಸಿ ಎಸ್.ಟಿ ಗೆ ಮೀಸಲಿಡಬೇಕಾದ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ.ಕಾಂಗ್ರೆಸ್‌ನವರು ನಾವು ಯಾವಾಗಲೂ ದಲಿತರ ಹಾಗೂ ರೈತರ ಪರವಾಗಿ ಕೆಲಸ ಮಾಡುತ್ತೇವೆಂದು ಅಧಿಕಾರಕ್ಕೆ ಬಂದ ಬಳಿಕ ದಲಿತರನ್ನು ಸಂಪೂರ್ಣ ಕಡೆಗಣಿಸಿದ್ದಾರೆ.ಎಸ್‌.ಇ.ಪಿ,ಟಿ.ಎಸ್‌.ಪಿಗೆ ಬರುವ ಅನುದಾನ ಇಂದಿಗೂ ಬಿಡುಗಡೆ ಮಾಡಿಲ್ಲ. ಇದರಿಂದ ದಲಿತ ಸಮಾಜದ ಅಭಿವೃದ್ಧಿ ಕುಂಟಿತವಾಗಿದೆ ಎಂದು ದೂರಿದರು.ತಾಲ್ಲೂಕಿನಲ್ಲಿ ಮಳೆ ಆರ್ಭಟಕ್ಕೆ ರಸ್ತೆ ಸೇತುವೆ ಹಾಳಾಗಿದೆ.100ಕ್ಕೂ ಅಧಿಕ ಮನೆ ಕುಸಿದು ಬಿದ್ದಿದೆ. ಅದರಲ್ಲಿ ದಲಿತರ ಮನೆಯೇ ಹೆಚ್ಚಾಗಿ ಕುಸಿದಿದೆ. ಅವರಿಗೆ ಪರಿಹಾರ ಕೊಡಲು ಸರಕಾರದಲ್ಲಿ ಹಣವಿಲ್ಲ. ಹಿಂದೆ ಬಿಜೆಪಿ ಸರಕಾರ ಸಂಪೂರ್ಣ ಬಿದ್ದ ಮನೆಗೆ 5 ಲಕ್ಷ ರೂ ಪರಿಹಾರ ನೀಡಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಸಂಪೂರ್ಣವಾಗಿ ಕುಸಿದ ಮನೆಗೆ ಕೇವಲ 1.2 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕರೇ ಸದನದಲ್ಲಿ ಅನುದಾನ ಹೆಚ್ಚು ನೀಡಬೇಕೆಂದು ಕೇಳಿಕೊಂಡಿರುವುದು ದುರ್ದೈವ. ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆಂದು ಕೇವಲ ಒಂದು ವರ್ಷದಲ್ಲಿ ವಾಲ್ಮಿಕಿ ಹಾಗೂ ಮುಡಾ ಹಗರಣದಲ್ಲಿ ಕಾಂಗ್ರೆಸ್ ಸರಕಾರ ಭಾಗಿಯಾಗಿರುವುದು ಬಯಲಿಗೆ ಬಂದಿದೆ. ದಾಖಲಾತಿ ತಿದ್ದುಪಡಿ ಮಾಡಿ ದಲಿತರಿಗೆ ನೀಡಬೇಕಾದ ನಿವೇಶನವನ್ನು ರಾಜಕಾರಣಿಗಳು ಪಡೆದಿರುವುದು ನಾಚಿಗೇಡಿನ ಸಂಗತಿ.ವಾಲ್ಮಿಕಿ ಮತ್ತು ಮುಡಾ ಹಗರಣ ಸಿಬಿಐ ತನಿಖೆಯಾಗಬೇಕೆಂದು ಒತ್ತಾಯಿಸಿದರು.

✍️ಬರಹ ಕೃಪೆ.✍️

ಸಿದ್ದಿಕ್ ಚಕ್ಕಮಕ್ಕಿ.

7847891857.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *