day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಪತ್ರಿಕೋದ್ಯಮದಲ್ಲಿ ಸುನೀಲ್ ಏರಿದ ಎತ್ತರ ಬೆರಗು ಮೂಡಿಸುವಂತದ್ದುಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರಿಗೆ ಶ್ರದ್ದಾಂಜಲಿ#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಪತ್ರಿಕೋದ್ಯಮದಲ್ಲಿ ಸುನೀಲ್ ಏರಿದ ಎತ್ತರ ಬೆರಗು ಮೂಡಿಸುವಂತದ್ದುಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರಿಗೆ ಶ್ರದ್ದಾಂಜಲಿ#avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

.,…,…*ಶ್ರದ್ದಾಂಜಲಿ*…..,.

 

ಪತ್ರಿಕೋದ್ಯಮದಲ್ಲಿ ಸುನೀಲ್ ಏರಿದ ಎತ್ತರ ಬೆರಗು ಮೂಡಿಸುವಂತದ್ದು

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರಿಗೆ ಶ್ರದ್ದಾಂಜಲಿ

ಮೂಡಿಗೆರೆ ತಾಲೊಕಿನ ಕಿರಗುಂದ ಗ್ರಾಮದ
ಕುಗ್ರಾಮವೊಂದರಲ್ಲಿ ಹುಟ್ಟಿ ಪತ್ರಿಕೋದ್ಯಮದಲ್ಲಿ ಸುನೀಲ್ ಏರಿದ ಎತ್ತರ ಬೆರಗು ಮೂಡಿಸುವಂತದ್ದು ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಹೇಳಿದರು.
ಮೂಡಿಗೆರೆ ಹಾಗೂ ಬಣಕಲ್ ಕಸಾಪ, ಕೊಟ್ಟಿಗೆಹಾರ ಪತ್ರಕರ್ತರ ಬಳಗ, ತಾಲ್ಲೂಕು ಕನ್ನಡ ಜಾನಪದ ಪರಿಷತ್ತು, ಹೇಮಾವತಿ ನದಿ ಉಗಮ ಹಿತರಕ್ಷಣಾ ಒಕ್ಕೂಟದ ವತಿಯಿಂದ ಕೊಟ್ಟಿಗೆಹಾರದ ಸ್ಪೂರ್ತಿ ಮಿತ್ರ ಮಂಡಳಿ ಅಧ್ಯಯನ ಕೇಂದ್ರದಲ್ಲಿ ನಡೆದ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರಿಗೆ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೂಡಿಗೆರೆಯ ಹೆಗ್ಗರವಳ್ಳಿ ಎಂಬ ಕುಗ್ರಾಮದಲ್ಲಿ ಹುಟ್ಟಿ ರಾಜ್ಯಮಟ್ಟದಲ್ಲಿ ಪತ್ರಿಕಾ ಕ್ಷೇತ್ರದಲ್ಲಿ ಗುರುತಿಸಿಕೊಂಡು ಮುಡಿಗೆರೆಯ ಹೆಸರನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದವರು ಸುನೀಲ್ ಅವರು. ಹಂತ ಹಂತವಾಗಿ ಮೇಲೇರಿ ಪತ್ರಿಕಾ ಕ್ಷೇತ್ರದಲ್ಲಿ ಅವರು ಗುರುತಿಸಿಕೊಂಡಿರುವುದು ಎಲ್ಲರಿಗೂ ಪ್ರೇರಣೆಯಾಗಿದೆ. ಅವರ ಅಕಾಲಿಕ ಮರಣ ಅತೀವ ದುಃಖ ತಂದಿದೆ ಎಂದರು.
ತಾಲ್ಲೂಕು ಕನ್ನಡ ಜಾನಪದ ಪರಿಷತ್ತು ತಾಲ್ಲೂಕು ಅಧ್ಯಕ್ಷ ಬಕ್ಕಿ ಮಂಜುನಾಥ್ ಮಾತನಾಡಿ ಸ್ಥಳೀಯ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಪತ್ರಿಕಾ ಕ್ಷೇತ್ರಕ್ಕೆ ಕಾಲಿಟ್ಟ ಸುನೀಲ್ ಅವರು ರಾಜ್ಯ ಮಟ್ಟದ ಪತ್ರಿಕೆಯಲ್ಲಿ ತಮ್ಮ ತನಿಖಾ ವರದಿಗಳಿಂದ ಮನೆ ಮಾತಾದವರು. ಆ ನಂತರದಲ್ಲಿ ತಾವೇ ಸ್ವಂತ ಪತ್ರಿಕೆ ಪ್ರಾರಂಭಿಸಿ ವರದಿಗಾರಿಕೆಯಲ್ಲಿ ಸಕ್ರಿಯವಾಗಿದ್ದರು ಎಂದರು.
ಹೇಮಾವತಿ ನದಿ ಉಗಮ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಮಾತನಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕ ಭಕ್ತೇಶ್, ಕಾಂಗ್ರೆಸ್ ಮುಖಂಡ ಪ್ರಭಾಕರ್, ಸ್ಥಳಿಯರಾದ ನಾಗೇಶ್, ಕೇಶವ, ಯಶೋಧ, ರೇಖಾ, ಅರಣ್ಯ ಇಲಾಖೆಯ ಬಸವರಾಜು, ಪೋಲಿಸ್ ಇಲಾಖೆಯ ವಿನಯ್, ಪತ್ರಕರ್ತರಾದ ಸಂತೋಷ್ ಅತ್ತಿಗೆರೆ, ಅನಿಲ್ ಮೊಂತೆರೊ, ತನು ಕೊಟ್ಟಿಗೆಹಾರ, ನಂದೀಶ್ ಬಂಕೇನಹಳ್ಳಿ ಇದ್ದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Navachaitanya Old Age Home

Career | job

About Author