day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ನಿಧನ:ಶ್ರೀಮತಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಳಿಗ್ಗೆ 6-30ಕ್ಕೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ನಿಧನ:ಶ್ರೀಮತಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಳಿಗ್ಗೆ 6-30ಕ್ಕೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ನಿಧನ: ಶ್ರೀಮತಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಳಿಗ್ಗೆ 6-30ಕ್ಕೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ

ರಾಜೇಶ್ವರಿ ತೇಜಸ್ವಿ- 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದವರು. ಹೆಣ್ಣುಮಕ್ಕಳಿಗೂ ತಮ್ಮ ಕಾಲ ಮೇಲೆ ನಿಂತುಕೊಳ್ಳುವ ವಿದ್ಯಾಭ್ಯಾಸ ಕೊಡಬೇಕೆನ್ನುವ ತಮ್ಮ ತಂದೆಯ ಉದಾತ್ತ ಧ್ಯೇಯದಿಂದಾಗಿ ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ ಮಾಡಲು ಮಾನಸ ಗಂಗೋತ್ರಿ ಮೈಸೂರಿಗೆ ಬಂದರು. ಅಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಪರಿಚಯವಾಗಿ ಪ್ರೀತಿಸಿದರು. ಆನಂತರ ಇವರ ಬದುಕಿನ ದಿಕ್ಕೇ ಬದಲಾಯಿಸಿತು. 1966ರಲ್ಲಿ  ವಿವಾಹವಾದರು. ‘ನನ್ನ ತೇಜಸ್ವಿ’ ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕ. ಈಗ ಅದು ಐದನೇ ಮುದ್ರಣ ಕಂಡಿದೆ.
ಇವರ ಹವ್ಯಾಸವೂ ವಿಭಿನ್ನವಾಗಿದೆ. ಕ್ರೋಶ-ಟೈಲರಿಂಗ್, ಮೊಮ್ಮಕ್ಕಳು ಮತ್ತು ನೆರೆಹೊರೆಯ ಮಕ್ಕಳಿಗೆ Stamp collection. ಇವತ್ತಿಗೆ E-mail ಇದ್ದರೂ ಅಪರೂಪದ Stamp collection ಮಾಡಿದ್ದಾರೆ. ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಇವರ ಎರಡನೆಯ ಪುಸ್ತಕ. ರಾಜೇಶ್ವರಿ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದು ಇಬ್ಬರೂ ಸಾಫ್ಟ್ ವೇರ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜೇಶ್ವರಿ ತೇಜಸ್ವಿಯವರು ಅಪರೂಪದ ಹವ್ಯಾಸಗಳೊಂದಿಗೆ ಮೂಡಿಗೆರೆಯಲ್ಲಿ ಕಾಫಿತೋಟವನ್ನ ನೋಡಿಕೊಳುತ್ತಾ ಇದ್ದರು..ಅವರು ಇಂದು ಬೆಳಿಗ್ಗೆ 6-30ಕ್ಕೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ..
ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಳಿಗ್ಗೆ 6-20 ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ‌.
ಬೆಂಗಳೂರಿನ ಎಚ್ ಎಸ್ ಆರ ಲೇಔಟ್ ನ ಪುತ್ರಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಜೆ 5-30 ರ ವರೆಗೆ ಅಂತಿಮ ದರ್ಶನ ಇರಲಿದೆ‌. ಆಸ್ಪತ್ರೆಗೆ ದೇಹದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಬರಹ: ನಂದೀಶ್ ಬಂಕೇನ ಹಳ್ಳಿ
ವರದಿ: ಮಗ್ಗಲಮಕ್ಕಿ ಗಣೇಶ್
ಬ್ಯುರೊ ನ್ಯೂಸ್

Navachaitanya Old Age Home

Career | job

About Author