लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಡಾಕ್ಟರ್ ಸಿ.ಎಂ.ಸುಲೋಚನ ಮೇಡಂ ಅವರನ್ನು ಸಮ್ಮೇಳನಕ್ಕೆ ಸ್ವಾಗತಿಸಿ ಅಭಿನಂದಿಸಲಾಯಿತು.

1 min read
Featured Video Play Icon

ಈ ದಿನ ಕಡೂರಿನ ಕನ್ನಡ ಭವನದಲ್ಲಿ, ಚಿಕ್ಕಮಗಳೂರು ಜಿಲ್ಲಾ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾಕ್ಟರ್ ಸಿ.ಎಂ.ಸುಲೋಚನ ಮೇಡಂ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಚಿಕ್ಕಮಗಳೂರು ಜಿಲ್ಲಾ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಹಾಗೂ ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಮ್ಮುಖದಲ್ಲಿ ಸಮ್ಮೇಳನಕ್ಕೆ ಸ್ವಾಗತಿಸಿ ಅಭಿನಂದಿಸಲಾಯಿತು.
ಈ ಸಮಾರಂಭದ ಅಧ್ಯಕ್ಷತೆಯನ್ನು ಚಿಕ್ಕಮಗಳೂರು ಜಿಲ್ಲಾ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಬಿ.ಸಿ.ಗೀತಾ ಅವರು ವಹಿಸಿದ್ದರು. ಸ್ವಾಗತ ಸಮಿತಿಯ ಕೋಶಾಧ್ಯಕ್ಷರಾದ ಶ್ರೀಯುತ ಕೆ.ಟಿ.ವೆಂಕಟೇಶ್ ರವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಸೂರಿ ಶ್ರೀನಿವಾಸ್ ಅವರು ಪ್ರಾಸ್ತಾವಿಕ ನುಡಿಗಳನ್ನು ನುಡಿದರು.ಜಿಲ್ಲಾ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಡಾಕ್ಟರ್ ಸಿ.ಎಂ. ಸುಲೋಚನ ಮೇಡಂ ಅವರು ಅಭಿನಂದನೆ ಸ್ವೀಕರಿಸಿ ಸಭೆಯನ್ನು ಉದ್ದೇಶಿಸಿ ತುಂಬು ಮನಸ್ಸಿನಿಂದ ಮಾತನಾಡಿದರು.
ಶ್ರೀಮತಿ ಸವಿತಾ ಸತ್ಯನಾರಾಯಣ ಅವರು ದೇವತಾ ಪ್ರಾರ್ಥನೆ ಮಾಡಿದರು. ಶ್ರೀಯುತ ಬಿ.ಎಸ್. ಭಗವಾನ್ ರವರು ನಾಡಗೀತೆಯನ್ನು ಹಾಡಿದರು.
ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಸಿಂಗಟಗೆರೆ ಸಿದ್ಧಪ್ಪನವರು ಸರ್ವರನ್ನೂ ಸ್ವಾಗತಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಎಸ್.ವೆಂಕಟೇಶ್ ಅವರು ಸರ್ವರಿಗೂ ವಂದನಾರ್ಪಣೆ ಸಲ್ಲಿಸಿದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀಯುತ ನಂಜುಂಡಸ್ವಾಮಿ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು.
ವೇದಿಕೆಯಲ್ಲಿ ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಶ್ರೀಯುತ ಹೆಚ್.ಎಂ.ಲೋಕೇಶ್, ಶ್ರೀಮತಿ ಸಾವಿತ್ರಿ ಗಂಗಣ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪದಾಧಿಕಾರಿಗಳಾದ ಶ್ರೀಯುತ ಬಿ.ಶಿವಕುಮಾರ್, ಶ್ರೀಯುತ ಟಿ.ಡಿ.ಸತ್ಯನ್ ಮುಂತಾದವರು ಉಪಸ್ಥಿತರಿದ್ದರು. ಈ ಸಮಾರಂಭಕ್ಕೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಪದಾಧಿಕಾರಿಗಳು, ಹೋಬಳಿ ಅಧ್ಯಕ್ಷರು ,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು, ಸಂಚಾಲಕರು ಆಗಮಿಸಿದ್ದರು. ಒಟ್ಟಾರೆ ಅಭಿನಂದನಾ ಸಮಾರಂಭವು ಯಶಸ್ವಿಯಾಗಿ ನೆರವೇರಿತು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

About Author

Leave a Reply

Your email address will not be published. Required fields are marked *