ಡಾ.ರಾಜ್ ಕುಮಾರ್ ಅವರ ಜನ್ಮದಿನಾಚರಣೆ.
1 min read
ಡಾ|| ರಾಜ್ ಚಿತ್ರಗಳು ಅನೇಕರಿಗೆ ಸ್ಪೂರ್ತಿ: ಮೋಹನ್
ಕಳಸ : ಕನ್ನಡದ ಅಸ್ಮಿತೆ ಮತ್ತು
ಆದರ್ಶವಾಗಿದ್ದ ನಟ ಡಾ|| ರಾಜ್ ಕುಮಾರ್ ಅವರು ಸದಭಿರುಚಿಯ ಸಿನಿಮಾಗಳಲ್ಲಿ ನಟನೆ ಮಾಡಿ ಲಕ್ಷಾಂತರ ಮಂದಿಯ ಬದುಕಿನಲ್ಲಿ ಸ್ಫೂರ್ತಿ ತಂದವರು. ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿದ್ದ ಇವರು ನಮ್ಮಗೆಲ್ಲಾ ದಾರಿದೀಪ ಎಂದು ಕಳಸ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಡಾ.
ಸಿ.ಆರ್.ಮೋಹನ್ ಕುಮಾರ್ ಹೇಳಿದರು.ಪಟ್ಟಣದಲ್ಲಿ ಡಾ|| ರಾಜ್ ಕುಮಾರ್ ಕನ್ನಡ ಸಂಘ ಮತ್ತು
ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತಾಶ್ರಯದಲ್ಲಿ ವರನಟ ಡಾ. ರಾಜ್ ಕುಮಾರ್ ಅವರ 94ನೇ ಜನ್ಮದಿನಾಚರಣೆಯ ಪ್ರಯುಕ್ತ ಸಂಘದ ಕಚೇರಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿದರು. ಕರ್ನಾಟಕ ರತ್ನ ಡಾ|| ರಾಜ್ ಕುಮಾರ್ ಅವರು ಮೇರು ವ್ಯಕ್ತಿತ್ವದ
ನಟ. ಅವರ ವಿನಮ್ರತೆಯ
ಗುಣವನ್ನು ನಾವೆಲ್ಲಾ ‘ಮೈಗೂಡಿಸಿಕೊಳ್ಳಬೇಕು.
ಕನ್ನಡ ನಾಡು, ನುಡಿ, ಸಂಸ್ಕೃತಿ ಯ ಬಗ್ಗೆ ಅಭಿಮಾನವು ಅನುಪಮ. ಹಾಗೂ ಎಂಥದೇ ಪಾತ್ರವಾದರೂ ಅದಕ್ಕೆ ಜೀವ ತುಂಬುವಂತಹ ಅದ್ಭುತ
ಅಭಿನಯ ಅವರಲ್ಲಿ ಅಡಗಿತ್ತು ಎಂದರು.
ಇದೇ ವೇಳೆ ಗಾಯಕಿ ಲಕ್ಷ್ಮೀನಾಗರಾಜ್ ಅವರು ಡಾ. ರಾಜ್ ಕುಮಾರ್ ರವರ ಚಲನಚಿತ್ರದ ಗೀತೆಗಳನ್ನು ಹಾಡುವ ಮೂಲಕ ಸಭಿಕರನ್ನು ಮನರಂಜಿಸಿದರು. ನಂತರ ನೆರೆದಿದ್ದ ಎಲ್ಲರಿಗೂ ಸಿಹಿ ವಿತರಿಸಲಾಯಿತು.

ಡಾ.ರಾಜ್ ಕನ್ನಡ ಸಂಘದ
ಅಧ್ಯಕ್ಷ ಕನ್ನಡ ರಾಜು ಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕ್ ಸಿಬ್ಬಂದಿಗಳಾದ ರಘು ರಾಮ್, ಸತ್ಯನಾರಾಯಣ, ಕರವೇ ಅಧ್ಯಕ್ಷ ಪೂರ್ಣೇಶ್, ಮಾಜಿ ಅಧ್ಯಕ್ಷ ಶ್ಯಾಮಚಾರ್, ಮುಖಂಡರಾದ ಸಂತೋಷ, ಚೌಡಪ್ಪ, ಕಬೀರ್, ಸುದರ್ಶನ್, ಶ್ರೇಯಸ್, ಗಾಯಕಿ ಲಕ್ಷ್ಮಿ ನಾಗರಾಜ್, ಮಮತ, ಲತಾ, ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್
ಬ್ಯೂರೋ ನ್ಯೂಸ್,ಅವಿನ್ ಟಿವಿ.