ಮೂಡಿಗೆರೆ ತಾಲೂಕು ವಿಶ್ವ ಹಿಂದು ಪರಿಷತ್ ಬಜರಂಗದಳದಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ.
1 min read



ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲೂಕಿನ,ಪಟ್ಟಣದ ಲಯನ್ಸ್ ವೃತ್ತದ ಬಳಿ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಾವುಗಳು ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುತ್ತೇವೆ ಎಂದು ನುಡಿದ ಕಾಂಗ್ರೆಸ್ ಪಕ್ಷದ ವಿರುದ್ಧ ದಿನಾಂಕ 04/05/2023ರ ಬುಧವಾರದಂದು ಮೂಡಿಗೆರೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಪ್ರಣಾಳಿಕೆಯ ಕರಪತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಹಿಂದು ವಿರೋಧಿ ನೀತಿಯನ್ನು ಖಂಡಿಸಿದರು.
ಇವರುಗಳಿಗೆ ಈ ಚುನಾವಣೆಯಲ್ಲಿ ಹಿಂದುಗಳೆಲ್ಲ ತಕ್ಕ ಪಾಠ ಕಲಿಸುತ್ತಾರೆ ಎಂದು ಗುಡುಗಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ತಾಲೂಕ್ ಅಧ್ಯಕ್ಷರು ಸಾಲುಮರದ ಮಹೇಶ್,ಸಂಚಾಲಕರಾದ ಅಜಿತ್, ಬಣಕಲ್ ಅಭಿ,ಸಹ ಸಂಚಾಲಕ ವಿನಯ್, ಸಂತೋಷ್,ತಾರೇಶ್ ಇದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

