“ನೀರ ಮೇಲಿನ ಗುಳ್ಳೆಯಂತೆ;ತೆಪ್ಪದಲ್ಲಿ ಜೀವ ಕೈಯಲ್ಲಿಡಿದು ದಿನನಿತ್ಯದ ಹೋರಾಟ.”
1 min read
ಅಮ್ತಿ ಹೊಳೆಕೂಡಿಗೆ ಮಲೆಕುಡಿಯ ಕುಟುಂಬಗಳಿಂದ ಚುನಾವಣೆ ಬಹಿಷ್ಕಾರ.






ರಸ್ತೆ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ.ಈ ಬಗ್ಗೆ ನಮ್ಮ ಅವಿನ್ ಟಿವಿಯೊಂದಿಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಮುಖ್ಯಸ್ಥ ಸತೀಶ್, ಕೂವೆ ಸಮೀಪ ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು ಮನೆಗಳ ಸುತ್ತ ಭದ್ರಾನದಿ ಆವರಿಸಿರುವುದರಿಂದ ಮುಖ್ಯ ರಸ್ತೆಗೆ ಸಂಪರ್ಕ ಇಲ್ಲದಂತಾಗಿದೆ. ಮನೆ ಕಟ್ಟಲು ಮರಳು, ಇಟ್ಟಿಗೆ ಮುಂತಾದ ಕಚ್ಚಾವಸ್ತುಗಳನ್ನು ತೆಪ್ಪದಲ್ಲೆ ತರಬೇಕಾಗಿದೆ.
೨೦೧೫ ರಿಂದ ರಸ್ತೆಗಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ರಸ್ತೆ ಅಥವಾ ತೂಗು ಸೇತುವೆ ನಿರ್ಮಾಣವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮಕ್ಕೆ ಬಂದರೂ ಕೇವಲ ಭರವಸೆ ನೀಡಿ ಹೋಗುತ್ತಾರೆ. ಜನಪ್ರತಿನಿಧಿಗಳ, ಅಧಿಕಾರಿಗಳ ಭರವಸೆ ಕೇಳಿ ಸಾಕಾಗಿದೆ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

