लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
19/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಜನ ಸಾಮಾನ್ಯರ ಏಳಿಗೆಗಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ : ಮಾಜಿ ಸಚಿವೆ ಶ್ರೀಮತಿ ಮೋಟಮ್ಮ.”

1 min read

ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರ ಪ್ರಭುಗಳು ಬದಲಾವಣೆ ಬಯಸಿದ್ದು ಕಾಂಗ್ರೆಸ್ ಪಕ್ಷದ ಕಡೆಗೆ ಒಲವು ತೋರಿಸುತ್ತಿದ್ದಾರೆ ಹಾಗೂ ಮತ ಯಾಚನೆಯ ಸಂದರ್ಭದಲ್ಲಿ ಎಲ್ಲಾ ಗ್ರಾಮಗಳಲ್ಲೂ ಕೂಡ ನಮ್ಮನು ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ‌ ಸಚಿವೆ ಶ್ರೀಮತಿ ಮೋಟಮ್ಮ ಅವರು ದಿನಾಂಕ 08/05/2023ರ ಸೋಮವಾರದಂದು ನಮ್ಮ ವಾಹಿನಿಯೊಂದಿಗೆ ಮಾತನಾಡುತ್ತ ಹೇಳಿದರು.

ಬಿಜೆಪಿ ಪಕ್ಷವು ಕೋಮುವಾದದ ಪಕ್ಷ ಇಂತಹ ಪಕ್ಷವೇನಾದರೂ ಅಧಿಕಾರಕ್ಕೆ ಬಂದರೆ ದೇಶ ಮತ್ತು ದೇಶದ ಸಂಪತ್ತು ಎರಡನ್ನೂ ಕೂಡ ಮಾಡಿರುವುದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲ ಎಂದು ಹೇಳಿದರು.

ಬಿಜೆಪಿ ಪಕ್ಷ ಆಡಳಿತಕ್ಕೆ ಬಂದ ನಂತರ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ.ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲ ಎಂದು ಹೇಳಿದರು.

ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಯನ ಮೋಟಮ್ಮ ಅವರು ಸಿದ್ಧರಿದ್ದಾರೆ ಆದ್ದರಿಂದ ಮತದಾರ ಪ್ರಭುಗಳು ಅವರನ್ನು ನಿಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.

ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಜಿ.ಸುರೇಂದ್ರ ಅವರು ಮಾತನಾಡುತ್ತಾ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಅವರು ಮೂಡಿಗೆರೆಗೆ ಕುಡಿಯುವ ನೀರಿನ ವ್ಯವಸ್ಥೆ, ತಾಲ್ಲೂಕು ಕಚೇರಿ, ತೋಟಗಾರಿಕಾ ಕಾಲೇಜು ತಂದಿದ್ದಾರೆ ಅದೇ ರೀತಿ ಅವರ ಪುತ್ರಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಯನ ಮೋಟಮ್ಮ ಅವರು ಅಭಿವೃದ್ಧಿ ಮಾಡುವ ಯೋಚನೆ ಇಟ್ಟುಕೊಂಡು ಚುನಾವಣೆಗೆ ಸ್ಪರ್ಧಿಸಿದ್ದಾರೆ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವ ಮೂಲಕ ಗೆಲ್ಲಿಸಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಕೋಮುವಾದ,ದೊಂಬಿ,ಗಲಭೆಗಳಿಲ್ಲದೆ ಸಹಬಾಳ್ವೆಯಿಂದ ಜನ ಸಾಮಾನ್ಯರು ಜೀವನ ನಡೆಸುತ್ತಿದ್ದರು ಆದರೆ ಬಿಜೆಪಿ ಪಕ್ಷ ಆಡಳಿತಕ್ಕೆ ಬಂದ ನಂತರ ಕೋಮುವಾದ ಹೆಚ್ಚಾಗಿ ಜನ ಸಾಮಾನ್ಯರ ಪರಿಸ್ಥಿತಿ ಹದಗೆಟ್ಟಿದೆ ಆದರಿಂದ ಕೋಮುವಾದಿ ಬಿಜೆಪಿ ಪಕ್ಷವನ್ನು ಹೊಡೆದೋಡಿಸಿ ಎಂದರು.

ಈ ಸಂದರ್ಭದಲ್ಲಿ ಮೂಡಿಗೆರೆ ತಾಲ್ಲೂಕು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಕ್ರಂಹಾಜಿ,ಮೂಡಿಗೆರೆ ತಾಲ್ಲೂಕು ಇನ್ಟೆಕ್ ಘಟಕದ ಅಧ್ಯಕ್ಷರಾದ ರಾಮಚಂದ್ರ ಒಡೆಯರ್,ಸುರೇಶ್ ಜೈನ್, ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ಕೇಶವ್, ಮೂಡಿಗೆರೆ ಪಟ್ಟಣ ಪಂಚಾಯಿತಿ ಹಾಲಿ ಸದಸ್ಯರಾದ ಹಂಝ, ಕುಮಾರ್ ರಾಜ್ ಅರಸ್,ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಕ್ಕ,ಬಿ.ಎಸ್.ಜಯರಾಮ್ ಗೌಡ,ಕೆ.ವೆಂಕಟೇಶ್,ಮನುಗೌಡ ಮುಂತಾದವರು ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *