“ಮತ ಯಾಚನೆ ಮತ್ತು ವಿಶೇಷ ಪೂಜೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಬಾಳೂರು ಹೋಬಳಿಯ ಜಾವಳಿಯ ಹೇಮಾವತಿ ನದಿ ಮೂಲದ ಮಹಾ ಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸ್ಥಳಕ್ಕೆ ದಿನಾಂಕ 08/05/2023ರ ಸೋಮವಾರದಂದು ಅದಿಶಕ್ತ್ಯಾತ್ಮಕ ಶ್ರೀಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಭೀಮೇಶ್ವರ ಜೋಷಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.



ಇದೇ ಸಂದರ್ಭದಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಜಾವಳಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಕಾರ್ತಿಕ್ ದಂಪತಿಗಳಿಗೆ ಶುಭ ಹಾರೈಸಿದರು ಹಾಗೂ ಜಾವಳಿ ಹೇಮಾವತಿ ನದಿ ಮೂಲ ಮಹಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಪರಿಕ್ಷಿತ್ ಜಾವಳಿ ಹಾಗೂ ನೂರಾರು ಕಾರ್ಯಕರ್ತರುಗಳು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

