“ಚುನಾವಣಾ ಹಬ್ಬಕ್ಕೆ ಜಿಲ್ಲಾಡಳಿತ ಸಜ್ಜು.”
1 min read
ಚಿಕ್ಕಮಗಳೂರು: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಾಳೆ ನಡೆಯಲಿರುವ ಮತದಾನಕ್ಕೆ ಜಿಲ್ಲೆಯಾದ್ಯಂತ, ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಆಯಾ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 1224 ಮತಗಟ್ಟೆಗಳಿದ್ದು, ಅದರಲ್ಲಿ 163 ಸೂಕ್ಷ್ಮ, 146 ಅತಿಸೂಕ್ಷ್ಮ, 906 ಸಾಮಾನ್ಯ ಮತಗಟ್ಟೆಗಳಿವೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಟ್ಟು 26 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಈ ಪೈಕಿ ಜಿಲ್ಲೆಯಲ್ಲಿ 4,68,599 ಪುರುಷ, 4,76,516 ಮಹಿಳಾ ಮತದಾರರಿದ್ದಾರೆ. 36 ಇತರೆ ಮತದಾರರಿದ್ದು, ಒಟ್ಟು 9,45,515 ಮತದಾರರಿದ್ದಾರೆ. ಚಿಕ್ಕಮಗಳೂರು ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಇವಿಎಂ ಯಂತ್ರಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಅಭ್ಯರ್ಥಿಗಳಿಗೆ ಮತದಾನಕ್ಕಿಂತ ಮಳೆಯದ್ದೇ ಚಿಂತೆ .!

ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ನಾಳೆ ನಡೆಯಲಿದ್ದು, ಮತ್ತೊಂದೆಡೆ ಮಳೆರಾಯನ ಆರ್ಭಟ ಹೆಚ್ಚಾಗುತ್ತಿದೆ. ಇದು ಅಭ್ಯರ್ಥಿಗಳಲ್ಲಿ ಕೊಂಚ ಬೇಸರವನ್ನು ತಂದಿದ್ದು ಮತದಾನಕ್ಕೆ ಎಲ್ಲಿ ಅಡ್ಡಿಯಾಗುತ್ತದೇಯೋ ಎಂಬ ಆತಂಕ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಾಮಾರುತವಿದ್ದು, ಇದರ ಪ್ರಭಾವ ರಾಜ್ಯದ ಮೇಲೂ ಬೀರಲಿದೆ. ಆದ್ದರಿಂದ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಕರಾವಳಿ ಸೇರಿದಂತೆ ಇನ್ನೂ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇದು ಅಭ್ಯರ್ಥಿಗಳ ಚಿಂತೆಗೆಡಿಸುವಂತೆ ಮಾಡಿದೆ. ಅಲ್ಲದೆ ಮತಗಟ್ಟೆಗಳ ಕೆಲಸಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಯೂ ಇದೆ. ಈಗಾಗಲೇ ಮತದಾನಕ್ಕೆ ಬೇರೆ ಊರುಗಳಲ್ಲಿ ನೆಲೆಸಿರುವ ಜನರನ್ನು ಕರೆತರಲು ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.
ಮತ ಎಣಿಕೆ ದಿನದಂದು ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್: ಕೆ. ಎನ್ ರಮೇಶ್

ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕೌಂಟ್ಡೌನ್ ಶುರುವಾಗಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಧಿಕಾರಿಗಳು ವೋಟಿಂಗ್ಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲೂ ಮತದಾನದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೋಲೀಸ್ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ. ಅದೇ ರೀತಿ ಮೇ 13 ರಂದು ಚಿಕ್ಕಮಗಳೂರು ನಗರದಲ್ಲಿರುವ ಐಡಿಎಸ್ಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲ್ಲಿದ್ದು, ಮತ ಎಣಿಕೆ ಸ್ಥಳದಲ್ಲಿ ಅಧಿಕ ಸಂಖೈಯಲ್ಲಿ ಜನರು ಆಗಮಿಸುವುದರಿಂದ ಜನಸಂದಣಿ ಏರ್ಪಡುವ ಸಾಧ್ಯತೆಯಿದ್ದು, ಅದಕ್ಕಾಗಿ ಮತ ಏಣಿಕೆಯ ಸಂದರ್ಭದಲ್ಲಿ ಯಾವುದೇ ತೊಂದರೆಗಳಾಗದಂತೆ ಜಿಲ್ಲಾಡಳಿತ ಸೂಕ್ತ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆಯ ಬೈಪಾಸ್ ರಸ್ತೆಯ ಎಐಟಿ ಸರ್ಕಲ್ನಿಂದ ನರಿಗುಡ್ಡನಹಳ್ಳಿವರೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧ ಹೇರಲಿದ್ದು, ಸದರಿ ಮಾರ್ಗದಲ್ಲಿ ವಾಹನಗಳ ನಿಲುಗಡೆ ಮಾಡುವಂತೆ ಸೂಚಿಸಲಾಗಿದೆ. ಅಲ್ಲದೆ ಐಡಿಎಸ್ಜಿ ಕಾಲೇಜಿನಿಂದ ದಂಟರಮಕ್ಕಿ ಸರ್ಕಲ್ ರಸ್ತೆ ಮಾರ್ಗದಲ್ಲಿ ವಾಹನಗಳ ನಿಲುಗಡೆ ಮಾಡಲು ಸೂಕ್ತ ಸ್ಥಳವನ್ನು ಗುರುತಿಸಲು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

