“ಡಿ.ಕೆ.ಶಿಯವರನ್ನು ಮುಖ್ಯಮಂತ್ರಿ ಮಾಡಿ : ಒಕ್ಕಲಿಗ ಸಂಘಟನೆಗಳ ಮನವಿ.”
1 min read
ಈ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತ ಪಡೆದಿರುವುದರಿಂದ, ಇನ್ನೇನು ಸರ್ಕಾರ ರಚಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲು ನಮ್ಮ ಒಕ್ಕಲಿಗ ಸಮುದಾಯದ ನಾಯಕರಾದ ಶ್ರೀ ಡಿ.ಕೆ.ಶಿವಕುಮಾರ್ ಅವರ ಪಾತ್ರ ಅತಿ ಮುಖ್ಯ ವಾಗಿದ್ದು ಹಾಗೂ ಶ್ರೀ ಎಸ್.ಎಂ. ಕೃಷ್ಣ ಅವರ ನಂತರ ಕಾಂಗ್ರೆಸ್ ಪಕ್ಷದಲ್ಲಿ ಸಂಪೂರ್ಣ ಬಹುಮತದೊಂದಿಗೆ ಒಕ್ಕಲಿಗ ನಾಯಕರೊಬ್ಬರು ಈ ರಾಜ್ಯದ ಮುಖ್ಯಮಂತ್ರಿ ಆಗುವುದರಿಂದ ಸಂಪೂರ್ಣ ಒಕ್ಕಲಿಗ ಸಮುದಾಯವು ಕಾಂಗ್ರೆಸ್ ಪಕ್ಷದ ಗೆಲುವಿಗೆ ಕೈ ಜೋಡಿಸಿದ್ದು, ಒಕ್ಕಲಿಗ ಸಮುದಾಯದ ಈ ನಿರೀಕ್ಷೆಯನ್ನ ಕಾಂಗ್ರೆಸ್ ಪಕ್ಷ ಹುಸಿಯಾಗಿಸುವುದಿಲ್ಲ, ನಾಡಿಗೆ ಅನ್ನ ನೀಡುವ ಅನ್ನದಾತರ ಸಮುದಾಯವಾದ ಒಕ್ಕಲಿಗ ಸಮಾಜ ಕಾಂಗ್ರೆಸ್ ಪಕ್ಷದ ಮೇಲಿಟ್ಟಿರುವ ಈ ನಂಬಿಕೆಗೆ ದ್ರೋಹ ಎಸಗುವುದಿಲ್ಲ ಎಂದು ಮೂಡಿಗೆರೆ ತಾಲೂಕಿನ ಕೆಂಪೇಗೌಡ ಒಕ್ಕಲಿಗರ ವೇದಿಕೆ ಹಾಗೂ ತಾಲೂಕಿನ ಒಕ್ಕಲಿಗರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರುಗಳು ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ನಮ್ಮ ವಾಹಿನಿಯ ಮೂಲಕ ತಿಳಿಸಿದ್ದಾರೆ .


ನಮ್ಮ ಒಕ್ಕಲಿಗ ಮಹಾ ಸಮುದಾಯ ಮತ್ತು ಸಂಸ್ಥಾನ ಮಠದ ಸ್ವಾಮಿಗಳು ಆದ ಶ್ರೀ,ಶ್ರೀ,ಶ್ರೀ, ನಿರ್ಮಲಾನಂದ ನಾಥ ಸ್ವಾಮೀಜಿ ಯವರ ಮಾರ್ಗದರ್ಶನದಂತೆ ,ತಾವುಗಳು ಸರ್ವ ಜನಾಂಗದ ಹಿತಕ್ಕಾಗಿ ಶ್ರೀ,ಡಿ.ಕೆ.ಶಿವಕುಮಾರ್ ರವರನ್ನು ಈ ರಾಜ್ಯದ ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಕೆಂಪೇಗೌಡ ಒಕ್ಕಲಿಗರ ವೇದಿಕೆಯ ಅಧ್ಯಕ್ಷರಾದ ಬ್ರಿಜೇಶ್ ಗೌಡ ಕಡಿದಾಳು ಹಾಗೂ ಒಕ್ಕಲಿಗರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಡಿ.ಕೆ. ಲಕ್ಷ್ಮಣ್ ಗೌಡ ಮನವಿ ಮಾಡಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷದಿಂದ ಗೆದ್ದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿಯಾಗಿ ಆಯ್ಕೆಯಾದ ಶ್ರೀಮತಿ ನಯನ ಮೋಟಮ್ಮನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.


