“ದಲಿತ ಅಥವಾ ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ : ಜೆ.ಡಿ.ಎಸ್ ಮುಖಂಡ ಎಂ.ಸಿ.ಹೂವಪ್ಪ.”
1 min read
ಡಾ.ಬಿ.ಆರ್ ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ನಡೆಯುವ ಚುನಾವಣೆಯು ಐದು ವರ್ಷಕ್ಕೊಮ್ಮೆ ಬರುತ್ತದೆ ಅದೇ ರೀತಿ ದಿನಾಂಕ 10/05/2023ರ ಬುಧವಾರದಂದು ನಡೆದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಚುನಾವಣೆ.
ಈ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ 17 ಅಭ್ಯರ್ಥಿಗಳು ಕೂಡ ಗೆದ್ದಿದ್ದಾರೆ.
ಕಾಂಗ್ರೆಸ್ಸಿನಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಯಕರುಗಳಿಗೇನೂ ಕಡಿಮೆಯಿಲ್ಲ ಆದರೆ ಕಾಂಗ್ರೆಸ್ ಪಕ್ಷಕ್ಕೆ ದಲಿತರ ಮತ್ತು ಅಲ್ಪಸಂಖ್ಯಾತರ ಮತಗಳು ಬೇಕು ಅವರಿಗೆ ಅಧಿಕಾರ ಮಾತ್ರ ಬೇಡ ಧೋರಣೆ ಎಷ್ಟು ಸರಿ.
ಆದ್ದರಿಂದ ದಲಿತ ಅಥವಾ ಅಲ್ಪಸಂಖ್ಯಾತ ನಾಯಕರಾದಂತವರಿಗೆ ಕೊಡಿ ಎಂದು ಜೆ.ಡಿ.ಎಸ್ ಮುಖಂಡ ಎಂ.ಸಿ.ಹೂವಪ್ಪ ಅವರು ದಿನಾಂಕ 15/05/2023ರ ಸೋಮವಾರದಂದು ನಮ್ಮ ವಾಹಿನಿಯೊಂದಿಗೆ ಮಾತನಾಡುತ್ತ ಹೇಳಿದರು.
ದಲಿತ ಸಮುದಾಯದ ನಾಯಕರಾದ ಜಿ.ಪರಮೇಶ್ವರ್ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಿ ಇಲ್ಲವೆಂದಾದರೆ ಅಲ್ಪಸಂಖ್ಯಾತ ಸಮುದಾಯದ ಯು.ಟಿ.ಖಾದರ್,ಜಮೀರ್ ಅಹಮದ್ ಇವರಿಗಾದರೂ ನೀಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆ.ಡಿ.ಎಸ್ ಪಕ್ಷದ ಮುಖಂಡರಾದ ದೇಜಪ್ಪ,ಜೆ.ಡಿ.ಎಸ್ ಪಕ್ಷದ ಅಲ್ಪಸಂಖ್ಯಾತ ಸಮುದಾಯದ ಮುಖಂಡರಾದ ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.




