“ನೂತನ ಶಾಸಕರಿಗೆ ಸನ್ಮಾನ.”
1 min read
ಸಕಲೇಶಪುರದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು
ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆ ಸಕಲೇಶಪುರದಲ್ಲಿ ದಿನಾಂಕ 17/05/2023 ರ ಬುಧವಾರದಂದು10.00 ಗಂಟೆಯಿಂದ ರಕ್ತದಾನ ಶಿಬಿರವನ್ನು ಆರಂಭಿಸಲಾಯಿತು .
ರಕ್ತದಾನ ಶಿಬಿರಕ್ಕೆ ಆಹ್ವಾನಿಸಿದ್ದ ನೂತನ ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜುರವರು ಭಾಗವಹಿಸಿ ಉದ್ಘಾಟನೆ ಮಾಡಿದ ನಂತರ ಮಾತನಾಡಿ ರಕ್ತದಾನ ಒಂದು ಶ್ರೇಷ್ಠ ದಾನ. ಇಂತಹ ಕಾರ್ಯಕ್ರಮಗಳಲ್ಲಿ ಎಲ್ಲಾ ಸರ್ಕಾರಿ ಇಲಾಖೆಯವರನ್ನು ಭಾಗವಹಿಸಲು ಆಹ್ವಾನಿಸಿರುವುದು ಸಂತಸ ತಂದಿದೆ. ಎಲ್ಲರೂ ರಕ್ತದಾನ ನೀಡಬೇಕೆಂದು ತಿಳಿಸಿ ಈ ಮೂಲಕ ಆಡಳಿತ ವೈದ್ಯಾಧಿಕಾರಿಗಳು ಕಾಫರ್ಡ್ ಸಾರ್ವಜನಿಕ ಆಸ್ಪತ್ರೆ. ಇವರುಗಳಿಗೆ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.
ಕ್ರಾಫರ್ಡ್ ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಮತ್ತು ಸಿಬ್ಬಂದಿ ವರ್ಗದಿಂದ ಶಾಸಕರಾದ ಸಿಮೆಂಟ್ ಮಂಜು ರವರಿಗೆ ಸನ್ಮಾನ ಮಾಡಲಾಯಿತು
ಈ ಸಂದರ್ಭದಲ್ಲಿ ಲಯನ್ ಸಂಸ್ಥೆಯ ಅಧ್ಯಕ್ಷರಾದ ಜೈ ಶಂಕರ್, ಕೃಷ್ಣಪ್ಪ ಪೂಜಾರಿ, ಡಾ. ನವೀನ್ ಚಂದ್ರ ಶೆಟ್ಟಿ, ಡಾ. ರತ್ನಾಕರ್ ಕಿಣಿ, ಡಾ.ಅರುಣ್, ಆಸ್ಪತ್ರೆ ಸಿಬ್ಬಂದಿ ವರ್ಗ ಹಾಗೂ ಇತರರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.




