“ಇ- ಕೆವೈಸಿ ಮಾಡಿಸಲು ರೈತರಿಗೆ ಸಲಹೆ.”
1 min read
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದು ಕೊಳ್ಳಲು, ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಹೊಂದದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆ ಯಾಗುವುದಿಲ್ಲ ಎಂದು ತಿಳಿಸಲಾಗಿದೆ. ಕೃಷಿ ಇಲಾಖೆಯಿಂದ ಈಗಾಗಲೆ ಈ ಬಗ್ಗೆಮಾಹಿತಿ ನೀಡಲಾಗಿದೆ.

ಆದರೂ ಕೂಡ ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಲ್ಲ.ಹೀಗಾಗಿ ಇದು ಕೊನೆಯ ಅವಕಾಶವಾಗಿದ್ದುಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಕೇಂದ್ರ ಅಥವಾ ಸಾಮಾನ್ಯಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತು ನಮ್ಮ ವಾಹಿನಿಗೆ ಮೂಡಿಗೆರೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗೀತಾ ಅವರು ಮಾಹಿತಿ ನೀಡಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.




