“ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ.”
1 min read
ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮೂಡಿಗೆರೆ ಜೇಸಿ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ 109ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಜೇಸಿ ಅಧ್ಯಕ್ಷೆ ಸವಿತಾ ರವಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ “ಕನ್ನಡದ ಅಸ್ಮಿತೆ ಮತ್ತು ಪರಿಷತ್ ನಡೆದು ಬಂದ ದಾರಿ”ಈ ವಿಷಯದ ಬಗ್ಗೆ ಲೇಖಕರು ಹಾಗೂ ಪತ್ರಿಕಾ ವರದಿಗಾರರು ಆದ ನಂದೀಶ್ ಬಂಕೇನಹಳ್ಳಿ ವಿಚಾರ ಮಂಡನೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮೂಡಿಗೆರೆ ತಾಲ್ಲೂಕು ಅಧ್ಯಕ್ಷರಾದ ಶಾಂತ ಕುಮಾರ್ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕರು ಮಗ್ಗಲಮಕ್ಕಿ ಗಣೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಕ್ಕಿ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಜಗದೀಪ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಎಂ.ಎಸ್.ನಾಗರಾಜ್, ಬಾಳೂರು ಹೋಬಳಿ ಘಟಕದ ಅಧ್ಯಕ್ಷ ರವಿ ಪಟೇಲ್ ಕೂವೆ, ಡಿ.ಕೆ ಲಕ್ಷಣ ಗೌಡ, ಹಸೈನಾರ್ ಬಿಳಗುಳ, ಪ್ರಧಾನ ಕಾರ್ಯದರ್ಶಿ ಪ್ರಕಾಶ್, ನಾರಾಯಣ, ಅಂಬಾವತಿ ಶೆಟ್ಟಿ, ಭಾನುಮತಿ, ಚಂದ್ರಶೇಖರ, ತಿಮ್ಮಪ್ಪ ಹ ಬಾ ನಾಗೇಶ್. ಮುಂತಾದವರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.




