“ಟಿ.ಡಿ.ರಾಜೇಗೌಡರಿಂದ ರಾಜಕೀಯ ಮುತ್ಸದ್ದಿಗಳ ಭೇಟಿ.”
1 min read

ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಶೃಂಗೇರಿ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ.ಡಿ ರಾಜೇಗೌಡರು ಕುಟುಂಬ ಸಮೇತರಾಗಿ ಭೇಟಿಯಾಗಿ ಆಶೀರ್ವಾದ ಪಡೆದು ಪೂಜ್ಯ ಮಹನೀಯರ ಆಶೀರ್ವಾದ, ಮಾರ್ಗದರ್ಶನ ನಮ್ಮೆಲ್ಲರಿಗೂ ಅತ್ಯಂತ ಅವಶ್ಯ. ಪೂಜ್ಯರ ಮಾರ್ಗದರ್ಶನದಲ್ಲಿ ಮುಂದೆ ಸಾಗೋಣ. ಉತ್ತಮ ಸಮಾಜ ನಿರ್ಮಿಸೋಣ ಎಂದು ಹೇಳಿದರು

ಹಾಗೂ ಮಲೆನಾಡಿನ ಹಿರಿಯ ರಾಜಕಾರಣಿ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರು,ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಡಿ.ಬಿ ಚಂದ್ರೇಗೌಡರನ್ನು ಶ್ರೀ ಟಿ.ಡಿ ರಾಜೇಗೌಡರು ಭೇಟಿಯಾಗಿ ಆಶೀರ್ವಾದ ಪಡೆದು ಯೋಗ ಕ್ಷೇಮ ವಿಚಾರಿಸಿದರು

ಮತ್ತು ರಾಜ್ಯದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಎಸ್.ಎಂ. ಕೃಷ್ಣ ರವರನ್ನು ಶ್ರೀ ಟಿ.ಡಿ ರಾಜೇಗೌಡರು ಭೇಟಿಯಾಗಿ ಕುಶಲೋಪರಿ ವಿಚಾರಿಸಿ ಆಶೀರ್ವಾದ ಪಡೆದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.





