लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಟಿಪ್ಪುರಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದಿದ್ದ ಅಶ್ವತ್ಥ ನಾರಾಯಣ್ ವಿರುದ್ಧ ಎಫ್‌ಐಆರ್…!

1 min read


ಮೈಸೂರು: ಮೂರು ತಿಂಗಳ ಹಿಂದೆ ಅಂದರೆ ಕಳೆದ ಫೆಬ್ರವರಿಯಲ್ಲಿ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ.
ಫೆಬ್ರವರಿ 15 ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ್ , ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನರನ್ನು ಹೇಗೆ ಕೊಂದು ಹಾಕಿದರೋ, ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೇವರಾಜ ಅವರು ಅಶ್ವತ್ಥ ನಾರಾಯಣ್ ಹೇಳಿಕೆ ನೀಡಿದ ದಿನವೇ ದೂರು ನೀಡಿದ್ದರು. ಆದರೆ, ಆ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆಗ ಬಿಜೆಪಿ ಸರ್ಕಾರವಿತ್ತು. ಬುಧವಾರ ಮತ್ತೆ ಠಾಣೆಗೆ ತೆರಳಿ ಮತ್ತೆ ದೂರು ಸಲ್ಲಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿದ್ದು, ಅಶ್ವತ್ಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಅಶ್ವತ್ಥ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು, ಅವರನ್ನು ತಕ್ಷಣ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು. ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿಯೂ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಈಗ ದೂರು ದಾಖಲಿಸಿಕೊಂಡಿರುವ ಪೊಲೀಸರು ಮಾಜಿ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 153 (ಗಲಬೆ ಉಂಟು ಮಾಡಲು ಪ್ರಚೋದಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬರಹ ಕೃಪೆ.

ತೀರ್ಥಹಳ್ಳಿ ಮಿತ್ರ ಮಂಜು

9108594842.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *