लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಭಾರತದ ಮೊದಲ ಪ್ರಧಾನಿ ಜವಹಾರ್ ಲಾಲ್ ನೆಹರುರವರ ಪುಣ್ಯ ಸ್ಮರಣೆ.”

1 min read

ದೇಶದ ಮೊದಲ ಪ್ರಧಾನಿ ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಭದ್ರ ಬುನಾದಿ ಹಾಕಿದ ಶ್ರೇಷ್ಠ ನಾಯಕ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ನಾವು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ನೆಹರೂ ಅವರ ಆಚಾರ ವಿಚಾರಗಳ ಬಗ್ಗೆ ದೊಡ್ಡ ಅಧ್ಯಯನ ಮಾಡಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನೆಹರೂ ಅವರ  ಪಂಚ ವಾರ್ಷಿಕ ಯೋಜನೆ ಇಡೀ ದೇಶದಲ್ಲಿ ಸಾರ್ವಜನಿಕ ಉದ್ದಿಮೆಗಳ ಸ್ಥಾಪನೆ, ದೇಶದಲ್ಲಿ ಹಸಿವು ನೀಗಿಸಿ, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ತೆಗೆದುಕೊಂಡ ನಿರ್ಧಾರ, ವಿದೇಶಾಂಗ ನೀತಿಗಳು, ದೇಶದ ಸಂವಿಧಾನಕ್ಕೆ ಕೊಟ್ಟ ಭದ್ರ ಬುನಾದಿ ಮರೆಯಲು ಸಾಧ್ಯವಿಲ್ಲ ಎಂದರು.

ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು ಎಂದು ಅಂಬೇಡ್ಕರ್ ಹೇಳಿದ್ದಾರೆ. ಅದೇ ರೀತಿ ನೆಹರೂ ದೇಶಕ್ಕೆ ದೊಡ್ಡ ಇತಿಹಾಸ ಕೊಟ್ಟಿದ್ದು, ನಾವು ಅವರ ಹಾದಿಯಲ್ಲಿ ಹೆಜ್ಜೆ ಹಾಕಬೇಕಿದೆ. ಆಮೂಲಕ ದೇಶವನ್ನು ಅಭಿವೃದ್ಧಿಶೀಲ ದೇಶವನ್ನಾಗಿ ಮಾಡಿದ್ದೇವೆ ಎಂದರು.

ನೆಹರೂ ಅವರು ಪಾಲಿಕೆ ಅಧ್ಯಕ್ಷ ಸ್ಥಾನದಿಂದ ದೇಶದ ಪ್ರಧಾನಮಂತ್ರಿ ಹುದ್ದೆವರೆಗೂ ಬೆಳೆದ ಧೀಮಂತ ನಾಯಕರು. ಈ ಸಂದರ್ಭದಲ್ಲಿ ಪಕ್ಷದ ಪರವಾಗಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *