“ನಾಪತ್ತೆಯಾದ ಯುವಕ ಪತ್ತೆ.”
1 min read
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿ ನಾಪತ್ತೆಯಾಗಿದ್ದ ಯುವಕನೊಬ್ಬ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಜೆಪಿನಗರದ ಪರೋಸ್ ಅಗರ್ ವಾಲ್ ನಾಪತ್ತೆಯಾಗಿದ್ದ ಯುವಕ.

ಏನಿದು ಘಟನೆ:
ರಾಣಿಝರಿ ವರೆಗೆ ಬೈಕ್ ನಲ್ಲಿ ಬಂದಿದ್ದು ಇಲ್ಲಿಂದ ಬಂಡಾಜೆ ಫಾಲ್ಸ್ ನ ಬದಿಯಿಂದ ಟ್ರೆಕ್ಕಿಂಗ್ ನಡೆಸಲು ಮುಂದಾಗಿದ್ದಾನೆ. ಆದರೆ ಸಂಜೆಯಾಗುತ್ತಿದ್ದಂತೆ ದಾರಿ ತಪ್ಪಿದ್ದು ಪೊಲೀಸ್ ಕಂಟ್ರೋಲ್ ರೂಂಗೆ ದೂರವಾಣಿ ಕರೆ ಮಾಡಿದ್ದಾನೆ. ಸಂಪೂರ್ಣ ಅರಣ್ಯ ಪ್ರದೇಶವಾದ ಕಾರಣ ಪತ್ತೆ ಹಚ್ಚುವುದು ಕ್ಲಿಷ್ಟಕರವಾಗಿತ್ತು.
ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆ, ಸ್ಥಳೀಯರಿಂದ ಶೋಧ ಕಾರ್ಯ ನಡೆಸಿ ನಾಪತ್ತೆಯಾಗಿದ್ದ ಪರೋಸ್ ಅಗರ್ ವಾಲ್ ನನ್ನು ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ ಮಾಡಿ ಬಾಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.






