“ಮಾನವೀಯತೆ ಎಲ್ಲಿದೆ….?”
1 min read
ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯನ್ನು ಬೈಕ್ನಲ್ಲಿ ಕೂರಿಸಿಕೊಂಡು ಬಂದ ಕಾರಣಕ್ಕೆ ಪ್ಯಾರಾ ಮೆಡಿಕಲ್ ಕಾಲೇಜಿನ ಮೂವರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಭದ್ರಾವತಿಯಲ್ಲಿ ದಿನಾಂಕ 29/05/2023ರ ಶುಕ್ರವಾರದಂದು ನಡೆದಿದೆ.
ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ವಿದ್ಯಾರ್ಥಿ ಹಾಗೂ ಖಲಂದರ್ ನಗರದ ಮುಸ್ಲಿಂ ವಿದ್ಯಾರ್ಥಿನಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಸಹಪಾಠಿಗಳು.
ವಿದ್ಯಾರ್ಥಿನಿಯ ಅಕ್ಕನಿಗೆ ಅಪಘಾತವಾಗಿರುವ ಬಗ್ಗೆ ಕಾಲೇಜಿನಲ್ಲಿದ್ದ ವೇಳೆ ಮಾಹಿತಿ ಲಭಿಸಿದೆ. ಹೀಗಾಗಿ ವಿದ್ಯಾರ್ಥಿಯು ತನ್ನ ಸ್ನೇಹಿತರಿಂದ ಬೈಕ್ ಪಡೆದು ಆಕೆಯನ್ನು ಖಲಂದರ್ ನಗರದ ಮನೆಗೆ ಕರೆದುಕೊಂಡು ಬಂದಿದ್ದ. ವಾಪಸ್ ತೆರಳುವಾಗ ಅಲ್ಲಿನ ಝೆಂಡಾ ಕಟ್ಟೆಯ ಬಳಿ ಗುಂಪೊಂದು ವಿದ್ಯಾರ್ಥಿಯನ್ನು ಅಡ್ಡಗಟ್ಟಿದೆ. ಆತನ ಹೆಸರು ಕೇಳಿದ ಗುಂಪು, ನಮ್ಮ ಸಮುದಾಯದ ಹುಡುಗಿಯನ್ನು ಏಕೆ ಬೈಕ್ನಲ್ಲಿ ಕೂರಿಸಿಕೊಂಡು ಬಂದೆ ಎಂದು ಪ್ರಶ್ನಿಸಿ ಹಲ್ಲೆ ಮಾಡಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಬಂದ ವಿದ್ಯಾರ್ಥಿಯ ಇಬ್ಬರು ಸ್ನೇಹಿತರ ಮೇಲೂ ಹಲ್ಲೆ ಮಾಡಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಮಿಜಾನ್ಖಾನ್ ಎಂಬುವರು ಜಗಳ ಬಿಡಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ಬಗ್ಗೆ ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿಯು ದಿನಾಂಕ 28/05/2023ರ ಭಾನುವಾರದಂದು ದೂರು ನೀಡಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.






