लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡಿಗೆರೆ ತಾಲೂಕಿನಲ್ಲಿ ಈ ಹಿಂದಿನ ಮಿತಿಮೀರಿದ ಭ್ರಷ್ಟಾಚಾರ ನಡೆದಿದೆ. ರಸ್ತೆ, ಕಟ್ಟಡ ಮುಂತಾದ ಕಾಮಗಾರಿಗಳು ಕೆಲವೇ ತಿಂಗಳಲ್ಲಿ ಹಾಳಾಗುತ್ತಿವೆ. ಇದೀಗ ಹೊಸ ಸರ್ಕಾರ ಬಂದಿದೆ. ಸ್ಥಳೀಯ ಶಾಸಕಿ ನಯನಾ ಮೋಟಮ್ಮ ಅವರು ಆಡಳಿತ ಪಕ್ಷದವರೇ ಆಗಿದ್ದಾರೆ. ಅವರ ಸಂಸ್ಥೆಗಳು, ಗ್ರಾಮಸಭೆಗಳ ಅಭಿಪ್ರಾಯ ಸಂಗ್ರಹಿಸಿದ ಜ್ವಲಂತ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಬೇಕೆಂದು ರೈತ ಮುಖಂಡರಾದ ಡಿ.ಎಸ್.ರಮೇಶ್ ಗೌಡ ನಮ್ಮ ವಾಹಿನಿಯ ಮೂಲಕ ಒತ್ತಾಯಿಸಿದರು.

ಸೋಮವಾರ ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಕದ ಜಿಲ್ಲೆಗಳಲ್ಲಿ ಹಾಸನ ಮತ್ತು ಶಿವಮೊಗ್ಗ ಗ್ರಾಮಗಳಲ್ಲಿ ನಿರಂತರ ವಿದ್ಯುತ್ ಪೂರೈಕೆಯಾಗುತ್ತಿದ್ದು, ಮೂಡಿಗೆರೆ ತಾಲ್ಲೂಕಿನಲ್ಲಿ ಹಿಂದಿನಿಂದಲೂ ವಿದ್ಯುತ್ ಸಮಸ್ಯೆ ಎದುರಾಗಿದೆ. ಚಿಕ್ಕಮಗಳೂರಿನಿಂದ ನೇರವಾಗಿ ಓನ್ ಲೈನ್ ಮೂಲಕ ವಿದ್ಯುತ್ ಪೂರೈಕೆ ಮಾಡಬೇಕು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ತಾಲೂಕಿನಲ್ಲಿ ಆನೆ ಬಿಡಾರ ಸ್ಥಾಪಿಸಬೇಕು. ಆಡಳಿತ ವ್ಯವಸ್ಥೆ ಬದಲಾಯಿಸಿ ತಾಲೂಕಿನ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸಂಪೂರ್ಣವಾಗಿ ಪರಿಹರಿಸಬೇಕು ಎಂದು ಹೇಳಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಡಿ.ಆರ್. ಪುಟ್ಟಸ್ವಾಮಿಗೌಡ ಮಾತನಾಡಿ, ಕಳೆದ ವರ್ಷ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚಿಕ್ಕಮಗಳೂರಿನಿಂದ ಮೂಡಿಗೆರೆವರೆಗೆ ರಸ್ತೆ ಅಗಲೀಕರಣ ಮಾಡುವುದಾಗಿ ಹೇಳಿದ್ದು, ಇದೂವರೆಗೆ ರಸ್ತೆ ಅಗಲೀಕರಣವಾಗಿಲ್ಲ. ಅವರು ಕ್ಷೇತ್ರಕ್ಕೆ ಬಂದಾಗ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತ್ರ ತಿರುಗಾಡಿ ಹೋಗುತ್ತಾರೆ ಜನ ಸಾಮಾನ್ಯರ ಬೇಟಿ ಮಾಡಿ ಸಮಸ್ಯೆ ಆಲಿಸುವುದಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ರೈತರಿಗೆ 0 ಪರ್ಸೆಂಟೇಜ್‌ನಲ್ಲಿ 5 ಲಕ್ಷ ಸಾಲ ನೀಡುತ್ತೇವೆಂದು ಹೇಳಿದ್ದರು. ಈಗಿನ ಸರಕಾರ 10 ಲಕ್ಷ ಸಾಲ ನೀಡುವುದಿಲ್ಲ ಎಂದು ಹೇಳಿದೆ. ಆ ಸಾಲ ಮುಂಗಾರು ಪೂರ್ವದಲ್ಲಿಯೇ ಸಕಾಲದಲ್ಲಿ ನೀಡುವಂತೆ ಸರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ವಾಸುದೇವ ಸತ್ತಿಗನಹಳ್ಳಿ ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *