लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳು ಹಾಗೂ ನೂತನ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ.”

1 min read

ಶ್ರೀ ವಿದ್ಯಾ ಭಾರತಿ ವಿದ್ಯಾ ಸಂಸ್ಥೆ (ರಿ) ಬಣಕಲ್ ನಲ್ಲಿ 2022 23ನೇ ಶೈಕ್ಷಣಿಕ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಬರಲು ಕಾರಣರಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಪರವಾಗಿ ದಿನಾಂಕ 02/06/2023ರ ಶುಕ್ರವಾರದಂದು ಅಭಿನಂದಿಸಲಾಯಿತು.

ಇದರೊಂದಿಗೆ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದ ನೂತನ ಭರವಸೆಯ ಶಾಸಕಿಯಾಗಿ ಆಯ್ಕೆಯಾಗಿರುವ ಶ್ರೀಮತಿ ನಯನ ಮೊಟ್ಟಮ್ಮ ಇವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.

ಕಾರ್ಯಕ್ರಮದ ಮೊದಲಿಗೆ ಶಾಲೆಗೆ ಆಗಮಿಸಿದ ನೂತನ ಶಾಸಕರು ಹಾಗೂ ಕಳೆದ ಸಾಲಿನ ಎಸ್. ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಆರತಿ ಬೆಳಗುವುದರ ಮೂಲಕ ಪುಷ್ಪಾರ್ಚನೆ ಮಾಡಿ ವಾದ್ಯಗೋಷ್ಠಿಯೊಂದಿಗೆ ಸ್ವಾಗತಿಸಲಾಯಿತು.

ವೇದಿಕೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಶಿವರಾಮ ಶೆಟ್ಟಿ ಶಾಲೆಯು 37 ವರ್ಷಗಳಿಂದ ಸತತವಾಗಿ ಸಮಾಜ ಮುಖಿಯಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ 11 ವರ್ಷಗಳಿಂದ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಬರುತ್ತಿದೆ. ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಮಧ್ಯಮ ಕುಟುಂಬದವರಾಗಿದ್ದು ಬಹಳಷ್ಟು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ ಈ ನಿಟ್ಟಿನಲ್ಲಿ ಕೆಲವೊಂದು ಕಲಿಕೆಗೆ ಪೂರಕವಾದಂತ ಅವಶ್ಯಕತೆಗಳನ್ನು ಪೂರೈಕೆ ಮಾಡುವುದು ಅವಶ್ಯಕವಾಗಿರುವುದರಿಂದ ಶಾಸಕರು ತಮಗೆ ಬರುವ ಅನುದಾನದಲ್ಲಿ ಒಂದಷ್ಟು ಅವಶ್ಯಕತೆಗಳನ್ನು ಈಡೇರಿಸುವಂತೆ ಭರವಸೆಯ ಶಾಸಕರಿಗೆ ಮನವಿ ಸಲ್ಲಿಸಿದರು.

ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಮೂಡಿಗೆರೆ ಕ್ಷೇತ್ರದ ನೂತನ ಭರವಸೆಯ ಶಾಸಕರಾದ ಶ್ರೀಮತಿ ನಯನ ಮೋಟಮ್ಮನವರು ಈ ಕ್ಷೇತ್ರದ ಜನ ನನ್ನ ಮೇಲೆ ಬಹಳಷ್ಟು ಭರವಸೆಗಳನ್ನು ಇಟ್ಟುಕೊಂಡಿದ್ದು ಅವರ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದರು ಹಾಗೂ ಮೂಡಿಗೆರೆ ಕ್ಷೇತ್ರದಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ಪೂರಕವಾದ ಅಂತಹ ವಾತಾವರಣವನ್ನು ಸೃಷ್ಟಿಸಬೇಕಿದೆ.ಪ್ರತಿಯೊಬ್ಬ ವಿದ್ಯಾರ್ಥಿಯು ನಮ್ಮ ಕಲಿಕಾ ಜೀವನದಲ್ಲಿಯೇ ಗುರಿಯನ್ನು ಹೊಂದಿ ಅದನ್ನು ಸಾಧಿಸುವಲ್ಲಿ ಪ್ರಯತ್ನ ನಿರಂತರವಾಗಿ ಇರಬೇಕೆಂದು ಆಗ ಮಾತ್ರ ಜೀವನದಲ್ಲಿ ಯಶಸ್ಸನ್ನ ಸಾಧಿಸಲು ಸಾಧ್ಯ ಮತ್ತು ಶಿಕ್ಷಣ ಪಡೆದಾಗ ಮಾತ್ರ ಒಬ್ಬ ವ್ಯಕ್ತಿ ಎಲ್ಲಾ ಕಡೆಗಳಲ್ಲೂ ಗೌರವಿಸಿಕೊಳ್ಳುತ್ತಾನೆ ಎಂದು ತಿಳಿಸಿದರು. ಹಾಗೂ ನನ್ನ ಅವಧಿಯಲ್ಲಿ ಈ ವಿದ್ಯಾಸಂಸ್ಥೆಗೆ ಬೇಕಾಗುವ ಅವಶ್ಯಕತೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಬಿ.ಈ.ಸುಬ್ರಾಯ ಗೌಡ. ಕಾರ್ಯದರ್ಶಿ ಬಿ.ಪಿ.ಲಿಂಗಪ್ಪ,ಮುಖ್ಯ ಶಿಕ್ಷಕರಾದ ಮಾಲತಿ ಟಿ.ಆರ್.,ನಾಗರಾಜು.ಸಿ,ಬಣಕಲ್ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಬ್ರಹ್ಮಣ್ಯ,ಬಣಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಇರ್ಫಾನ್, ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಹೊಸಕೆರೆ ರಮೇಶ್,ಮಧು,ಸಬ್ಲಿ ದೇವರಾಜ್, ಶಿಕ್ಷಕರಾದ ವಸಂತ್ ಹಾರ್ಗೋಡು,ಭಕ್ತೇಶ್, ಮನಮೋಹನ್,ಶೇಖರಪ್ಪ,ಗೀತಾ,ಪ್ರತಾಪ್, ಲಿಂಗರಾಜು,ಅಶ್ವಿತಾ,ರಂಜಿತ,ಅನುಷಾ,ಆಶಾ,ಪಲ್ಲವಿ, ಜಯಂತಿ ಹಾಗೂ ವಿದ್ಯಾರ್ಥಿಗಳ ಪೋಷಕರಾದ ಶಾಲಿನಿ ಸೋಮೇಶ್,ಗೋಪಾಲ್,ಧರ್ಮೇಗೌಡ ಮತ್ತು ಶಾಲಾ ಅಡುಗೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *