“ಕಳಸೇಶ್ವರ ಸ್ವಾಮಿಯ ಅಷ್ಟ ಬಂಧ ಕಲಶೋತ್ಸವ.”
1 min read
ಚಿಕ್ಕಮಗಳೂರು ಜಿಲ್ಲೆಯ,ಕಳಸ ತಾಲ್ಲೂಕಿನ, ಸುತ್ತಮುತ್ತಲಿನ ಗ್ರಾಮಸ್ಥರ ಆರಾಧ್ಯ ದೈವವಾದ ಕಳಸೇಶ್ವರ ಸ್ವಾಮಿ ಮತ್ತು ಪರಿವಾರ ದೇವರುಗಳ ಜೀರ್ಣ ಅಷ್ಟಬಂಧ ಬ್ರಹ್ಮಕಲಶೋತ್ಸವವು ದಿನಾಂಕ 07/06/2023ರ ಬುಧವಾರದಿಂದ ದಿನಾಂಕ 09/06/2023ರ ಶುಕ್ರವಾರದವರೆಗೆ ನಡೆಯಲಿದೆ.
7ರಂದು ಗಿರಿಜಾಂಬಾದೇವರ ಸನ್ನಿಧಿಯಲ್ಲಿ ಜೀರ್ಣ ಅಷ್ಟಬಂಧ, ಬ್ರಹ್ಮ ಕುಂಭಾಭಿಷೇಕ ನೆರವೇರಲಿದೆ.8ರಂದು ಆನೆವಿಘ್ನೇಶ್ವರ ಸ್ವಾಮಿ ಮತ್ತು ಸರ್ವಾಂಗಸುಂದರಿ ಅಮ್ಮನ ಸನ್ನಿಧಿಯಲ್ಲಿ ಜೀರ್ಣ ಅಷ್ಟಬಂಧ, ಬ್ರಹ್ಮಕುಂಭಾಭಿಷೇಕ, ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.
9ರ ಶುಕ್ರವಾರ ಬೆಳಿಗ್ಗೆ 11.55ಕ್ಕೆ ಶೃಂಗೇರಿ ಶಾರದಾ ಪೀಠದ ವಿಧುಶೇಖರ ಸ್ವಾಮೀಜಿ ಕಳಸೇಶ್ವರ ಸ್ವಾಮಿ ಮತ್ತು ಪರಿವಾರ ದೇವರಿಗೆ ಜೀರ್ಣ ಅಷ್ಟಬಂಧ ತ್ತು ಬ್ರಹ್ಮಕುಂಭಾಭಿಷೇಕ ನೆರವೇರಿಸಲಿದ್ದಾರೆ.
ಆನಂತರ 12.30ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ವಿಧುಶೇಖರ ಸ್ವಾಮೀಜಿ ಉಪನ್ಯಾಸ ನೀಡಲಿದ್ದಾರೆ.ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸದೆ ಶೋಭಾ ಕರಂದ್ಲಾಜೆ, ಭರವಸೆಯ ಶಾಸಕಿ ನಯನಾ ಮೋಟಮ್ಮ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನಸಭಾ ಸದಸ್ಯ ಎಸ್.ಎಲ್. ಭೋಜೇಗೌಡ, ಜಿ.ಭೀಮೇಶ್ವರ ಜೋಷಿ ಭಾಗವಹಿಸಲಿದ್ದಾರೆ.
ಅಂದು ಸಂಜೆ 6 ಗಂಟೆಗೆ ಓಂ ನಮಃ ಶಿವಾಯ ಎಂಬ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ.7ರಂದು ಸಂಜೆ 6ರವರೆಗೆ ದೇವಸ್ಥಾನಕ್ಕೆ ಹಸಿರು ಕಾಣಿಕೆ ಅರ್ಪಿಸಲು ಅವಕಾಶ ಇದೆ ಎಂದು ದೇವಸ್ಥಾನದ ವ್ಯಸವ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟಸುಬ್ಬಯ್ಯ ತಿಳಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.







