“ದೇಶದ ಆರ್ಥಿಕತೆಯ ಬಗ್ಗೆ ತಪ್ಪು ಮಾಹಿತಿ : ಸುಬ್ರಹ್ಮಣ್ಯಂ ಸ್ವಾಮಿ.”
1 min read
ದೇಶದ ಆರ್ಥಿಕತೆಯ ಬಗ್ಗೆ ಕೇಂದ್ರ ಸರಕಾರ ತಪ್ಪು ಅಂಕಿ ಅಂಶಗಳನ್ನು ನೀಡುತ್ತಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯು ಬಿಜೆಪಿಗೆ ಇರಿಸು ಮುರಿಸನ್ನುಂಟು ಮಾಡಿದೆ. ಅಲ್ಲದೆ ಆರ್ಥಿಕತೆಯ ಬಗ್ಗೆ ಶೀಘ್ರದಲ್ಲಿ ಅಂಕಿ ಅಂಶಗಳನ್ನು ಪುರಾವೆಯಾಗಿ ನೀಡುವೆ ಎಂದು ಅವರು ಹೇಳಿದ್ದು ಈ ಬಗ್ಗೆ ಬಿಜೆಪಿಯಲ್ಲಿ ತಳಮಳ ಪ್ರಾರಂಭವಾಗಿದೆ.ಈ ಕುರಿತಂತೆ ಸುಬ್ರಹ್ಮಣ್ಯಂ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಭಾರತದ ಆರ್ಥಿಕ ಅಂಕಿ ಅಂಶಗಳನ್ನು ಕೂಲಂಕಶವಾಗಿ ವಿಶ್ಲೇಷಿಸಿದ್ದೇನೆ. ಭಾರತದ ಪ್ರಗತಿಪೂರ್ಣ ಆರ್ಥಿಕತೆಯ ಬಗ್ಗೆ ಮಾತಾಡುವುದು ಆಧಾರರಹಿತವಾಗಿದೆ ಎಂದಿದ್ದಾರೆ.
ಶೀಘ್ರದಲ್ಲೇ ನಾನು ಅಂಕಿ ಅಂಶ ಬಹಿರಂಗಪಡಿಸುತ್ತೇನೆ. ಸಂಕ್ಷಿಪ್ತವಾಗಿ ಹೇಳುವುದಾದರೆ ಜಿಡಿಪಿಯ ಬೆಳವಣಿಗೆಯ ದರವು ಕೊರೋನಾದಿಂದ ಚೇತರಿಸಿಕೊಳ್ಳುವುದು ಕಮ್ಮಿಯಾಗಿದೆ. ಇದು ನೆಹರು ಅವಧಿಗಿಂತ ಕಡಿಮೆಯಾಗಿದೆ ಎಂದವರು ಟ್ವೀಟ್ ಮಾಡುವ ಮೂಲಕ ಹೇಳಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








