“ಯೋಧರಿಗೆ..ಅನಾರೋಗ್ಯ.??”
1 min read
ಮಧ್ಯಾಹ್ನದ ಊಟ ಸೇವಿಸಿದ ನಂತರ 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲಿ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್ನಲ್ಲೇ ತಯಾರಾದ ಆಹಾರ ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥತೆಗೆ ಒಳಗಾಗಿದ್ದಾರೆ.ಅಸ್ವಸ್ಥರಾದ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜು ಭೇಟಿ ಸೈನಿಕರ ಯೋಗ ಕ್ಷೇಮ ವಿಚಾರಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








