“ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಅಗತ್ಯ : ಕಿರಣ್ ಕುಮಾರ್.”
1 min read
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸ್ಥಳೀಯ ಸಂಸ್ಥೆ ಮೂಡಿಗೆರೆ ದಿನಾಂಕ 09/06/2023ರ ಶುಕ್ರವಾರ ದಂದು ಸಿ.ಆರ್.ಪಿ ಮತ್ತು ಬಿ.ಆರ್.ಪಿ ಸಭೆಯನ್ನು ಬಿ.ಇ.ಓ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಎಲ್ಲಾ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳನ್ನು ಸ್ಥಾಪಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆಯನ್ನು ಹೆಚ್ಚಿಸುವ ಸಲುವಾಗಿ ಮುಖ್ಯ ಶಿಕ್ಷಕರುಗಳಿಗೆ ತಿಳಿ ಹೇಳಬೇಕೆಂದು ಸಭೆಯಲ್ಲಿ ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾ ಸಂಘಟಕರಾದ ಶ್ರೀಯುತ ಕಿರಣ್ ಕುಮಾರ್ ಅವರು ಸಭೆಯನ್ನುದ್ದೇಶಿಸಿ ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯ ಅಂತರಾಷ್ಟ್ರೀಯ ಯುವ ಸಂಘಟನೆ ನಾಲ್ಕು ಕೋಟಿಗೂ ಮೀರಿ ಸಮವಸ್ತ್ರಧಾರಿಗಳುಳ್ಳ ಈ ಚಳುವಳಿ ಪ್ರಪಂಚದ 216 ರಾಷ್ಟ್ರಗಳಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ.ಈ ಯುವ ಸಮುದಾಯಕ್ಕೆ ಸಾಮಾಜಿಕ ಹೊಣೆಗಾರಿಕೆ ಹಾಗೂ ಜೀವನ ಮೌಲ್ಯಗಳು ಬೆಳವಣಿಗೆಗೆ ಸಂಪೂರ್ಣ ಸಹಕಾರಿಯಾಗಿರುವ ಸ್ಕೌಟ್ಸ್ ಗೈಡ್ಸ್ ಚಳುವಳಿಯನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಬೇಕೆಂಬುದೇ ಚಳುವಳಿಯ ಉದ್ದೇಶ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ತನ್ನ ಘಟಕಗಳನ್ನು ಹೊಂದಿ ಈ ಕಾರ್ಯ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಮಾತನಾಡಿದರು.


ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಚೇರ್ಮನ್ ಶ್ರೀಯುತ ಹೇಮಂತ್ ರಾಜ್, ಸ್ಕೌಟ್ಸ್ ಮತ್ತು ಗೈಡ್ಸ್ ತಾಲ್ಲೂಕು ಅಧ್ಯಕ್ಷರಾದ ಶ್ರೀಯುತ ಮಗ್ಗಲಮಕ್ಕಿ ಗಣೇಶ್, ಉಪಾಧ್ಯಕ್ಷರಾದ ಶ್ರೀಯುತ ಹಮೀದ್,ತಾಲ್ಲೂಕು ಕಾರ್ಯದರ್ಶಿಯಾದ ಚೇತನ್, ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರಾದ ಹೆಚ್.ಎನ್.ನಿಹಾಲ್ ಹಾಗೂ ತಾಲ್ಲೂಕಿನ ಎಲ್ಲಾ ಸಿ.ಆರ್.ಪಿ ಹಾಗೂ ಬಿ.ಆರ್.ಪಿ.ಗಳು ಹಾಜರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.







