“ಹತ್ತೂರು ತಿರುಗಿದರೂ ದೊರೆಯದ ಶೌಚಾಲಯ : ಮಹಿಳೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್.”
1 min read
ಪ್ರಕೃತಿ ಪ್ರೇಮಿಗಳ ಸ್ವರ್ಗ, ಪ್ರವಾಸಿಗರ ಮೆಚ್ಚಿನ ತಾಣವಾದ ಚಿಕ್ಕಮಗಳೂರಿನ ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಅಲ್ಲಿ ಕನಿಷ್ಠ ಶೌಚಾಲಯದಂತಹ ಮೂಲಸೌಕರ್ಯವಿಲ್ಲದೆ ತಾನು ಅನುಭವಿಸಿದ ಯಾತನೆಯನ್ನು ಮಹಿಳೆಯೊಬ್ಬರು ರಾಷ್ಟ್ರಪತಿ ಮರ್ಮು ಅವರಿಗೆ ಪತ್ರ ಮುಖಾಂತರ ವಿವರಿಸಿದ್ದಾರೆ. ಇದೀಗ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕನ್ನಡದಲ್ಲಿ ಪತ್ರ ಬರೆದಿರುವ ಜಡೆಮ್ಮ ಎಂಬ ಮಹಿಳೆ ತನಗೆ ಎದುರಾದ ಸಂಕಷ್ಟವನ್ನು ಎಳೆಎಳೆಯಾಗಿ ವಿವರಿಸಿದ್ದಾರೆ. ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಕನಿಷ್ಠ ಶೌಚಾಲಯಗಳನ್ನಾದರೂ ನಿರ್ಮಿಸುವಂತೆ ಪತ್ರದಲ್ಲಿ ಮಹಿಳೆ ಒತ್ತಾಯಿಸಿದ್ದಾರೆ. ನೀವು ರಾಷ್ಟ್ರಪತಿಯಾದರೂ ಮಹಿಳೆಯಾಗಿರುವ ಕಾರಣ ನಿಮಗೆ ನನ್ನ ಯಾತನೆ ಹೆಚ್ಚು ಅರ್ಥವಾಗಬಹುದು ಎಂದು ವಿವರಿಸಿದ್ದಾರೆ. ಅಲ್ಲದೆ “ನನ್ನಂತಹ ಸಾಮಾನ್ಯ ಮಹಿಳೆಯರ ನೋವನ್ನು ತಿಳಿಸುವುದು ಪತ್ರದ ಮುಖ್ಯ ಉದ್ದೇಶ ಎಂದು ಹೇಳಿದ್ದಾರೆ.
“ಕೆಲವು ದಿನಗಳ ಹಿಂದೆ ನಾನು ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿಗೆ ಭೇಟಿ ನೀಡಿದ್ದೆ, ಬಾಬಾಬುಡನ್ಗಿರಿಯಲ್ಲಿ ಈ ವೇಳೆ ನನಗೆ ನೈಸರ್ಗಿಕ ಕರೆ ಒತ್ತಡ ಆರಂಭವಾಯಿತು. ಈ ವೇಳೆ ಸಾರ್ವಜನಿಕ ಶೌಚಾಲಯಕ್ಕಾಗಿ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ. “ನಂತರ ಸೀತಾಳಯ್ಯನಗಿರಿ ಹತ್ತಿ ಸಾರ್ವಜನಿಕ ಶೌಚಾಲಯಕ್ಕಾಗಿ ಅವರಿವರಲ್ಲಿ ಕೇಳಿದೆ. ಅಲ್ಲಿಯೂ ಶೌಚಾಲಯವಿರಲಿಲ್ಲ. ಈ ವೇಳೆ ಕ್ಷಣಕ್ಷಣಕ್ಕೂ ಯಾತನೆ ಅನುಭವಿಸಿದೆ. ಬಳಿಕ ಸಹಿಸಲಾಗದೆ ಅವಮಾನ ಬದಿಗಿಟ್ಟು ಮೂತ್ರ ವಿಸರ್ಜನೆ ಮಾಡಿದೆ ಎಂದು ಹೇಳಿದ್ದಾರೆ.
ಪ್ರತಿದಿನವೂ ಜನರು ತಮ್ಮ ಧರ್ಮ ಮತ್ತು ದೇವರಿಗಾಗಿ ಹೋರಾಡುತ್ತಾರೆ, ಆದರೆ ಶೌಚಾಲಯಗಳನ್ನು ನಿರ್ಮಿಸುವ ಬಗ್ಗೆ ಅವರ ನಿರ್ಲಕ್ಷ್ಯ ದುರದೃಷ್ಟಕರ. ಇಂತಹ ಪ್ರಸಿದ್ಧ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ಸಂವಿಧಾನದ 19 ಮತ್ತು 21 ನೇ ವಿಧಿಯ ಉಲ್ಲಂಘನೆಯಾಗಿದೆ. ನಾವು ಮಂಗಳ ಗ್ರಹವನ್ನು ತಲುಪಿದ್ದೇವೆ ಆದರೆ ಭೂಮಿ ಮೇಲೆ ಅಗತ್ಯವಿದ್ದಲ್ಲಿ ಶೌಚಾಲಯ ನಿರ್ಮಿಸಲು ಸಾಧ್ಯವಾಗಿರುವುದು ಶೋಚನೀಯ ಎಂದು ವಿವರಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.







