लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಕಾಂಗ್ರೆಸ್ ಸರ್ಕಾರ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಸಂಕಲ್ಪ ಹಾಗೂ ಯೋಜನೆ ಜೊತೆ ಜೊತೆಗೆ ಹೆಜ್ಜೆ ಹಾಕಬೇಕು ಎಂದು ಮನವಿ ಮಾಡುತ್ತೇವೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಉಳಿದಂತೆ ಅಭಿವೃದ್ಧಿ ವಿಚಾರದಲ್ಲಿ ಸಹಕಾರ ಇರಲಿ ಎಂದು ಮನವಿ ಮಾಡುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದಲ್ಲಿ ಶನಿವಾರ ನಮ್ಮ ವಾಹಿನಿಯೊಂದಿಗೆ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗಿದೆ. ಒತ್ತುವರಿ ಸಮಸ್ಯೆಯನ್ನು ಬಹುತೇಕ ಬಗೆಹರಿಸಲಾಗಿದೆ. ಬೇಲೂರು-ಚಿಕ್ಕಮಗಳೂರು ರೈಲ್ವೆ ಯೋಜನೆ ಕಾಮಗಾರಿ ಆರಂಭಿಸುವ ಹಂತಕ್ಕೆ ಬಂದಿದೆ ಎಂದು ತಿಳಿಸಿದರು.

ಕೇಂದ್ರದಿಂದ ಜಿಲ್ಲೆಯ ರೈತರಿಗೆ 267 ಕೋಟಿ:


ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯ 1,42,356 ಫಲಾನುಭವಿಗಳಿಗೆ 13 ಕಂತುಗಳಲ್ಲಿ 267.07 ಕೋಟಿ ರೂ ನೀಡಲಾಗಿದೆ. ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ 195 ಕೋಟಿ, ಅಮೃತ್ ಕುಡಿಯುವ ನೀರು ಯೋಜನೆಗೆ 52.27 ಕೋಟಿ, ಉದ್ಯಾನಗಳ ಅಭಿವೃದ್ಧಿ ಇನ್ನಿತರೆ ಅಭಿವೃದ್ಧಿಗೆ 13.75 ಕೋಟಿ, 15 ನೇ ಹಣಕಾಸು ಯೋಜನೆಯಡಿ ಪಂಚಾಯತ್ ರಾಜ್ ಸಂಸ್ಥೆಗಳಿಗೆ 7.85 ಕೋಟಿ ರು. ಅನುದಾನ ಕೇಂದ್ರದಿಂದ ಬಂದಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕೇಂದ್ರಿಯ ವಿದ್ಯಾಲಯ ಸ್ಥಾಪನೆಗೆ 28 ಕೋಟಿ, ಜಲ್ ಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ 298 ಕೋಟಿ, ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ 200 ಕೋಟಿ ರೂ, ಚಿಕ್ಕಮಗಳೂರು ಪಶು ಆಸ್ಪತ್ರೆಗೆ 1.79 ಕೋಟಿ ರೂ, ಪಿಎಂಜಿಎಸ್‌ವೈ 200 ಕೋಟಿ ರೂ, ಖೇಲೋ ಇಂಡಿಯಾ ಯೋಜನೆಯಡಿ 11.50 ಕೋಟಿ ರೂ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 9.97 ಕೋಟಿ, ಜನ್‌ಧನ್ ಯೋಜನೆಯಡಿ 15.69 ಕೋಟಿ ರೂ, ರಾಷ್ಟ್ರೀಯ ಉಚ್ಛ ಶಿಕ್ಷಣ ಯೋಜನೆಯಡಿ 2 ಕೋಟಿ ರೂ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಜ್ಯೊತಿ ಯೋಜನೆಯಡಿ 185 ಕೋಟಿ ರೂ ಹಾಗೂ ಪ್ರಧಾನಮಂತ್ರಿ ಉದ್ಯೊಗ ಸೃಜನೆ ಯೋಜನೆಯಡಿ 10.14 ಕೋಟಿ ರೂ ಅನುದಾನ ಬಂದಿದೆ ಎಂದು ತಿಳಿಸಿದರು.

ಪಿಎಂಕೆಎಸ್‌ವೈ ಯೋಜನೆಯಡಿ 61 ಕೋಟಿ ರೂ, ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ 24.47 ಕೋಟಿ ರೂ, ಕೃಷಿ ಯಾಂತ್ರಿಕರಣ ಯೋಜನೆಯಡಿ 6.90 ಕೋಟಿ ರೂ, ತೆಂಗು ಅಭಿವೃದ್ಧಿ ಮಂಡಳಿಗೆ 25.30 ಕೋಟಿ ರೂ, ತಾಳೆ ಬೆಳೆ ವ್ಯವಸಾಯಕ್ಕೆ 28 ಲಕ್ಷ ರೂ, ಫಸಲ್ ಭೀಮಾ ಯೋಜನೆಯಡಿ 7 ಲಕ್ಷ ರೂ. ನೆರವನ್ನು ನೀಡಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 55.87 ಕೋಟಿ ರೂ. ಅನುದಾನ ಬಂದಿದೆ. ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ 11.52 ಕೋಟಿ ರೂ, ಕೋವಿಡ್‌ನಲ್ಲಿ ಮೃತಪಟ್ಟವರ ಕುಟುಂಬಕ್ಕೆ 2.03 ಕೋಟಿ ರೂ. ಪರಿಹಾರ ಒದಗಿಸಲಾಗಿದೆ ಎಂದು ತಿಳಿಸಿದರು.

ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿ ಯೋಜನೆಯಡಿ 3.51 ಕೋಟಿ:


ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿ ಯೋಜನೆಯಡಿ 3.51 ಕೋಟಿ ರೂ, ಅಮೃತ್ ಸರೋವರ ಯೋಜನೆಯಡಿ 100 ಸಣ್ಣ ಕೆರೆಗಳ ಅಭಿವೃದ್ಧಿ, ನೀರಾವರಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ 8 ಕೋಟಿ ರೂ, ರಾಷ್ಟ್ರೀಯ ಹೆದ್ದಾರಿಗೆ 400 ಕೋಟಿ ರೂ, ಅತಿವೃಷ್ಟಿಪರಿಹಾರಕ್ಕೆ 20 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ಡಿ.ಎನ್.ಜೀವರಾಜ್, ಡಿ.ಎಸ್.ಸುರೇಶ್, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಮುಖಂಡರಾದ ದೀಪಕ್ ದೊಡ್ಡಯ್ಯ, ಟಿ.ರಾಜಶೇಖರ್, ದೇವರಾಜ ಶೆಟ್ಟಿ ಇದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *