“ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ (ರಿ.) ಸಂಸ್ಥೆಯ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.”
1 min read
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ (ರಿ.) ಸಂಸ್ಥೆಯ ವತಿಯಿಂದ ಪ್ರತಿವರ್ಷದಂತೆ 2022-23
ಸಾಲಿನಲ್ಲಿಯೂ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಿ, ಪುರಸ್ಕರಿಸಲಾಗುವುದು.
ಪ್ರತಿಭಾವಂತ ವಿದ್ಯಾರ್ಥಿಗಳು ಸ್ವ-ವಿವರಗಳೊಂದಿಗೆ (ಇತ್ತೀಚಿನ ಒಂದು ಭಾವಚಿತ್ರ, ದೃಢೀಕರಿಸಿದ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರ) ಅರ್ಜಿಯನ್ನು ಮಹಾಸಭೆಯ www.veerashaivamahasabha.in Online ಅಲ್ಲಿ 10-06-2023 ರಿಂದ 25-06-2023ರೊಳಗೆ ಸಲ್ಲಿಸುವುದು, Online ಮೂಲಕ ಬಂದ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುವುದು,ಅಂಚೆ, ಕೋರಿಯರ್ ಅಥವಾ ಖುದ್ದಾಗಿ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ (ರಿ.) ಸಂಸ್ಥೆ ತಿಳಿಸಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








