“ಸರ್ಕಾರಿ ಶಾಲೆ ಉಳಿಸಿ ಬೆಳೆಸಿ : ಸಿಮೆಂಟ್ ಮಂಜು.”
1 min read
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಣಗೂರಿನಲ್ಲಿ ಅವಿರತ ಎನ್ ಜಿ ಓ ಸಂಸ್ಥೆ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಕಾರ್ಯ ಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿ ಸರ್ಕಾರಿ ಶಾಲೆಗಳನ್ನು ಉಳಿಸುವ ಪ್ರಯತ್ನ ಮಾಡಬೇಕು. ಗುಣ ಮಟ್ಟದ ಶಿಕ್ಷಣ ನೀಡಿದರೆ ಮಾತ್ರ ಮಕ್ಕಳಿಗೆ ಒಳ್ಳೆಯ ಭವಿಷ್ಯವಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೆಳೆಯುವ ಪ್ರಯತ್ನ ಮಾಡಬೇಕು ಮಕ್ಕಳಿಗೆ ದೇಶಭಿಮಾನ ಮೂಡಿಸಬೇಕು ಆಗ ಮಾತ್ರ ದೇಶ ಮುನ್ನಡೆ ಸಾಧಿಸಲು ಸಾಧ್ಯ ಎಂದರು.

ಶಾಲಾ ಮುಖ್ಯ ಶಿಕ್ಷರಾದ ಸಜಾನ್ ಹಾಗೂ ನಾಗೇಶ್, ರತ್ನಮ್ಮ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ, ಸದಸ್ಯ ಸತೀಶ್ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ತೇಜ ಹಾಗೂ ಗ್ರಾಮಸ್ಥರು ಇದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








