“ಸರ ಗಳ್ಳತನ.”
1 min read
ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಕಳ್ಳರು ವೇಗವಾಗಿ ಬೈಕಿನಲ್ಲಿ ಬಂದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ಕೊರಳಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾರೆ.
ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಸುಗ್ಗಿಕಲ್ ರಸ್ತೆಯಲ್ಲಿ ದಿನಾಂಕ 12/06/2023ರ ಮಂಗಳವಾರದಂದು ಹಾಡಹಗಲೇ ಈ ಘಟನೆ ನಡೆದಿದೆ.
ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ ಲೀಲಾವತಿ ಎಂಬುವವರು ಸರ ಕಳೆದುಕೊಂಡವರು.
ಸುಗ್ಗಿಕಲ್ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸರಗಳ್ಳರು ಬೈಕಿನಲ್ಲಿ ಅತ್ತ ಇತ್ತ ತಿರುಗಿ ಸಮೀಪದಲ್ಲಿ ಬೇರೆ ಯಾರು ಇಲ್ಲದ ಸ್ಥಳದಲ್ಲಿ ಅಜ್ಜಿಯ ಬಳಿ ವಿಳಾಸ ಕೇಳುವ ರೀತಿಯಲ್ಲಿ ನಾಟಕವಾಡಿದ್ದಾರೆ.
ಒಬ್ಬ ಸವಾರ ಬೈಕಿನಿಂದ ಇಳಿದು ಮಹಿಳೆಯ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದು ಕಿತ್ತಿದ್ದು ಇಬ್ಬರು ಬೈಕ್ ಏರಿ ಪರಾರಿಯಾಗಿದ್ದಾರೆ.
ಸರವನ್ನು ಎಳೆದು ಕಿತ್ತ ರಭಸಕ್ಕೆ ಮಹಿಳೆ ಕೆಳಗೆ ಬಿದ್ದಿದ್ದಾರೆ.
ಸರಗಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








