“ಬಿಫರ್ ಜಾಯ್ ಫುಲ್ ಪವರ್.”
1 min read
ಬಿಫರ್ ಜಾಯ್ ಚಂಡಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಕಲ್ಲು ಹಾಕುವ ತುರ್ತು ಕಾಮಗಾರಿಯನ್ನು ಜಿಲ್ಲಾ ಆಡಳಿತ ಆರಂಭಿಸಿದೆ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈಚೆಗೆ ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದರು.
ಅವರ ಸೂಚನೆಯಂತೆ ಉಳ್ಳಾಲದ ಸಮುದ್ರ ತೀರಕ್ಕೂ ಬಿಫರ್ಜಾಯ್ ಚಂಡಮಾರುತದ ಪರಿಣಾಮ ತಟ್ಟುವ ಸಾಧ್ಯತೆ ಇರುವುದರಿಂದ ಕಲ್ಲುಗಳನ್ನು ಹಾಕುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆಡಳಿತದ ಮೂಲಗಳು ತಿಳಿಸಿವೆ.ಸದ್ಯ ಭಾರಿ ಗಾತ್ರದ ಅಲೆಗಳು ಅಬ್ಬರಿಸುತ್ತಿವೆ. ಸಮುದ್ರ ತೀರದ ಮನೆಗಳ ರಕ್ಷಣೆಗೆ ಕಲ್ಲುಗಳನ್ನು ಹಾಕುವ ಈ ಕಾರ್ಯ ಆರಂಭವಾಗಿದೆ. ಮುಂದಿನ 48 ಗಂಟೆಗಳಲ್ಲಿ ಕಡಲಿನ ಅಬ್ಬರ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








