लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಮಕ್ಕಳನ್ನು ಸಮಾಜಕ್ಕೆ ಆಸ್ತಿಯನ್ನಾಗಿ ಮಾಡಿ” – ಸೂರಿ ಶ್ರೀನಿವಾಸ್

1 min read

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ. ವತಿಯಿಂದ ನಡೆಸಲಾದ ಪ್ರತಿಭಾ ಪುರಸ್ಕಾರ ಮತ್ತು ಕವಿಗೋಷ್ಠಿ ಕಾರ್ಯಕ್ರಮವು ಪಟ್ಟಣದ ಬಾಲಭವನದ ಸಭಾಂಗಣದಲ್ಲಿ ದಿನಾಂಕ – 18-06-2023ನೇ ಭಾನುವಾರದಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶಾಂತಕುಮಾರ್ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸೂರಿ ಶ್ರೀನಿವಾಸ್ ಪ್ರಸ್ತುತ ಸಮಾಜದಲ್ಲಿ ಮಕ್ಕಳು ವಿವಿಧ ರೀತಿಯಲ್ಲಿ ಹಾದಿ ತಪ್ಪುತ್ತಿದ್ದು. ಪೋಷಕರು ಮಕ್ಕಳನ್ನು ಬೆಳೆಸುವಾಗ ಮೈಮರೆಯಬಾರದು. ಪೋಷಕರು ತಮ್ಮ ಮಕ್ಕಳಿಗೆ ಆಸ್ತಿಯನ್ನು ಮಾಡದೆ ತಮ್ಮ ಮಕ್ಕಳನ್ನು ಸಮಾಜಕ್ಕೆ ಆಸ್ತಿಯನ್ನಾಗಿ ಮಾಡಬೇಕು ಎಂದು ತಿಳಿಸಿದರು.

ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಕಡೂರು ತಾಲ್ಲೂಕು ಕ.ಸಾ.ಪ.ಅಧ್ಯಕ್ಷರಾದ ಸಿಂಗಟಗೆರೆ ಸಿದ್ದಪ್ಪ ಮಾತನಾಡಿ ಪ್ರಸ್ತುತ ಸಮಾಜದಲ್ಲಿ ಮಕ್ಕಳಲ್ಲಿ ಸಂಸ್ಕಾರದ ಕೊರತೆ ಎದ್ದುಕಾಣುತಿದ್ದು.ಮಕ್ಕಳಿಗೆ ಸಂಸ್ಕಾರದ ಪಾಠ ಅಗತ್ಯವಾಗಿ ನೀಡಬೇಕಾಗಿದೆ ಎಂದರು.

ಹತ್ತನೇ ತರಗತಿಯಲ್ಲಿ ಅತ್ಯುನ್ನತ ಫಲಿತಾಂಶ ಪಡೆದ ತಾಲ್ಲೂಕಿನ ಪ್ರತಿಭಾನ್ವಿತ ಮಕ್ಕಳನ್ನು ಅಭಿನಂದಿಸಿ ಮಾತನಾಡಿದ ಮೂಡಿಗೆರೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೇಮಂತ್ ರಾಜ್. ಎಲ್ಲಾ ರೋಗಗಳನ್ನು ನಿವಾರಿಸುವ ಗುಣ ಸಾಹಿತ್ಯಕ್ಕಿದೆ ಹಾಗಾಗಿ ಎಲ್ಲರೂ ತಮ್ಮ ಜೀವನದಲ್ಲಿ ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ತಾಲ್ಲೂಕಿಗೆ ಕೀರ್ತಿ ತಂದ ಕುಮಾರಿ ರಶ್ಮಿ ಇವಳನ್ನು ಕ.ಸಾ.ಪ. ಹಾಗೂ ಕಾಫಿ ನಾಡು ಸಮಾಜ ಸೇವಾ ಸಂಸ್ಥೆಯ ಪರವಾಗಿ ಇದರ ಸದಸ್ಯರಾದ ಹಸೈನಾರ್ ಬಿಳುಗುಳ ಇವರು.ಅಭಿನಂದಿಸಿದರು.
ಕವಿಗೋಷ್ಠಿಯಲ್ಲಿ 12 ಯುವ ಕವಿಗಳು ಭಾಗವಹಿಸಿ ಕವನ ವಾಚನ ಮಾಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ. ನಿರ್ಮಲ ಮಂಚೇಗೌಡ . ಶ್ರೀಮತಿ ಅನಿತಾ ಜಗದೀಪ್. ಶ್ರೀಮತಿ ವಿಶಾಲ ನಾಗರಾಜ್. ರವಿಪಟೇಲ್ ಕೂಡಿವೆ. ಪತ್ರಕರ್ತರಾದ ಕಿರುಗುಂದ ಅಬ್ಬಾಸ್. ಎಂ.ಎಸ್.ನಾಗರಾಜ್. ಆರ್.ಪ್ರಕಾಶ್. ವಿ.ಪಿ.ನಾರಾಯಣ್. ಹಾ.ಬಾ.ನಾಗೇಶ್. ವಸಂತ್ ಹಾರ್ಗೋಡು. ವಿನೋದ್ ಬಿದರಹಳ್ಳಿ. ಶ್ರೀಮತಿ ಲತಾ. ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಮತ್ತು ಹೋಬಳಿ ಪದಾಧಿಕಾರಿಗಳು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿರಿದ್ದರು.

ಬರಹ ಮತ್ತು ಚಿತ್ರ ಕೃಪೆ.
ವಸಂತ್ ಹಾರ್ಗೋಡು

ವರದಿ….
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್. ಅವಿನ್ ಟಿ.ವಿ.

About Author

Leave a Reply

Your email address will not be published. Required fields are marked *