“ಒಂದು ಉಂಗುರದ ರಹಸ್ಯ.”
1 min read
ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವಂತೆ ಆಶೀರ್ವದಿಸಿ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್.ಡಿ ತಮ್ಮಯ್ಯ ಮನವಿ ಮಾಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸ್ವರ್ಣಪೀಠಕೇಶ್ವರಿ ದತ್ತಾಶ್ರಮದಲ್ಲಿ ಮಾತನಾಡಿದ ಅವರು, ಡಿಕೆಶಿ ಸಿಎಂ ಆಗುವ ಆಸೆಯನ್ನ ನೂರಾರು ಜನರ ಮುಂದೆ ಹೊರಹಾಕಿದ್ದಾರೆ. ನಮಗೆಲ್ಲ ಟಿಕೆಟ್ ನೀಡಿ ತುಂಬಾ ಸಹಾಯ ಮಾಡಿದ್ದಾರೆ. ಅವರಿಗೆ ಸಿಎಂ ಆಗುವಂತೆ ಆಶೀರ್ವದಿಸಿ ಎಂದು ಅವಧೂತ ವಿನಯ್ ಗುರೂಜಿ ಬಳಿ ಮನವಿ ಮಾಡಿದ್ದಾರೆ.ಇದೇ ವೇಳೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಮಾತನಾಡಿ, ಕೂಡ ಅವಧೂತ ವಿನಯ್ ಗುರೂಜಿ ಮೂರು ಉಂಗುರ ಮಾಡಿಸಿದ್ದರು. 2018 ರಲ್ಲಿ ಒಂದನ್ನು ಕುಮಾರಸ್ವಾಮಿಗೆ ಕೊಟ್ಟಿದ್ದರು. ಮತ್ತೊಂದನ್ನ ಯಡಿಯೂರಪ್ಪನವರಿಗೆ ನೀಡಿದ್ದರು, ಇಬ್ಬರೂ ಸಿಎಂ ಆಗಿದ್ದರು. ಉಳಿದೊಂದು ಉಂಗುರವನ್ನ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ್ದಾರೆ. ಇದಕ್ಕೆ ನಾನೇ ಸಾಕ್ಷಿ ಎಂದು ನುಡಿದಿದ್ದಾರೆ.ಚುನಾವಣೆಗೂ ಮುನ್ನವೇ ನಾನು ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲವಾ?. ಕುಮಾರಸ್ವಾಮಿಯವರು ಸಿಎಂ ಆಗುವುದಿಲ್ಲವಾ? ಎಂದು ಕೇಳಿದ್ದೆಕ್ಕೆ ಇಲ್ಲ ಇಲ್ಲ ಈ ಬಾರಿ ಡಿಕೆಶಿ ಸರ್ಕಾರ ಬರುವುದು ಎಂದು ಹೇಳಿದ್ದರು. ಡಿಕೆಶಿ ಕೂಡ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು ಎಂದು ತಿಳಿಸಿದ್ದಾರೆ.ಶಾಸಕ ತಮ್ಮಯ್ಯ ಹಾಗೂ ಶರವಣ ಅವರ ಮನವಿ ಪುರಸ್ಕರಿಸಿದ ವಿನಯ್ ಗುರೂಜಿ ಅವರು ಡಿಕೆಶಿ ಸಿಎಂ ಆಗುವುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಶಾಸಕ ತಮ್ಮಯ್ಯ ಮನವಿ ಮಾಡಿದ್ದು, ಅವರ ಆ ಬಯಕೆ ಈಡೇರಿಕೆಯ ದಿನಗಳು ದೂರವಿಲ್ಲ. ಡಿ.ಕೆ.ಶಿವಕುಮಾರ್ ಮಗುವಿನಂತಹ ಮನಸ್ಸಿನವರು, ಅವರು ಮಠಕ್ಕೆ ಚಿರಪರಿಚಿತರು. ದೇವರು ಇರುವುದೇ ಬಂಡೆಯ ಮೂರ್ತಿಯಲ್ಲಿ, ನಾವು ಮೊದಲು ಅದನ್ನ ಕರೆಯುವುದೇ ಬಂಡೆ ಎಂದು. ಬಂಡೆಯೊಳಗೊಂದು ಮುಗ್ಧ ಮನಸ್ಸು ಇದೆ ಎಂದು ಡಿಕೆಶಿ ಅವರನ್ನ ಹಾಡಿ ಹೊಗಳಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.










