“ಆನೆ ಮತ್ತು ಮಾನವ ಸಂಘರ್ಷ ಹಾಗೂ ಸಣ್ಣ ಹಿಡುವಳಿದಾರರ ಸಮಸ್ಯೆ ಬಗೆಹರಿಸಿ : ಟಿ.ಡಿ.ರಾಜೇಗೌಡ.”
1 min read
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳು ನಾಡಿಗೆ ಬಾರದಂತೆ ತಡೆಯಲು ಈಗಾಗಲೇ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದ್ದು ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮಾನ್ಯ ಅರಣ್ಯ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ್ ಖಂಡ್ರೆ ಅವರನ್ನು ಶೃಂಗೇರಿ ಕ್ಷೇತ್ರದ ಶಾಸಕರಾದ ಶ್ರೀ ಟಿ.ಡಿ ರಾಜೇಗೌಡರು ನಿಯೋಗದೊಂದಿಗೆ ಭೇಟಿ ಮಾಡಿ ಹಲವು ವಿಚಾರಗಳ ಮೇಲೆ ಚರ್ಚೆ ನಡೆಸಿದರು. ಇದಕ್ಕಾಗಿ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಕೋರಲಾಗುವುದು ಮತ್ತು 1978ಕ್ಕೆ ಮೊದಲಿನಿಂದ ಸಾಗುವಳಿ ಮಾಡುತ್ತಿರುವ ಸಣ್ಣ ಹಿಡುವಳಿದಾರರ ಸಮಸ್ಯೆ ಪರಿಹರಿಸಲು ಜಂಟಿ ಸಮೀಕ್ಷೆ ನಡೆಸುವ ಭರವಸೆಯನ್ನು ಮಾನ್ಯ ಸಚಿವರು ನೀಡಿದರು.
ಮೂಡಿಗೆರೆಯ ಭರವಸೆಯ ಶಾಸಕಿ ಶ್ರೀಮತಿ ನಯನ ಮೋಟಮ್ಮ, ಹಿರಿಯ ನಾಯಕರುಗಳಾದ ಶ್ರೀ ಬಿ.ಎಲ್.ಶಂಕರ್, ಶ್ರೀ ಎಚ್.ಎಂ. ವಿಶ್ವನಾಥ್, ಶ್ರೀಮತಿ ಮೋಟಮ್ಮ ನಿಯೋಗದಲ್ಲಿ ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.











