” ಯೋಗ ನಿತ್ಯ ಬದುಕಿನ ಭಾಗವಾಗಬೇಕು”……ಬಿ.ಶಿವರಾಮ ಶೆಟ್ಟಿ.
1 min read
ಶ್ರೀ ವಿದ್ಯಾ ಭಾರತಿ ವಿದ್ಯಾ ಸಂಸ್ಥೆ( ರಿ ) ಬಣಕಲ್ ಇವರ ವತಿಯಿಂದ. ಬಣಕಲ್ ಚರ್ಚ್ ಸಭಾಭವನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ ಶಿವರಾಮ ಶೆಟ್ಟಿ. ಮಾತನಾಡಿ ಯೋಗ ದಿನಾಚರಣೆಗೆ ಮಾತ್ರ ಮೀಸಲಾಗದೆ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಂಡು ಸಧೃಡ ಆರೋಗ್ಯ ಪಡೆಯುವಲ್ಲಿ ಗಮನಹರಿಸಬೇಕು ಮತ್ತು ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿಗೆ ಪಾತ್ರವಾಗಿದೆ ಈ ದಿನ ಇಡೀ ವಿಶ್ವದಲ್ಲಿ ಭಾರತ ಯೋಗ ದಿನಾಚರಣೆಯನ್ನು ಆಚರಿಸುವ ಮೂಲಕ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಆರೋಗ್ಯವನ್ನು ಕಾಪಾಡುವಲ್ಲಿ ಯೋಗವು ಬಹಳ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಆದ್ದರಿಂದ ತಮ್ಮ ದಿನನಿತ್ಯದ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಪ್ರಕಟಿಸಿದರು.

ಶಾಲಾ ಮುಖ್ಯ ಶಿಕ್ಷಕಿಯಾದ ಮಾಲತಿ. ಟಿ. ಆರ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಶಾಲೆಯ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಯೋಗ ದಿನಾಚರಣೆಯ ಅಂಗವಾಗಿ ಈ ವರ್ಷದ ಧ್ಯೇಯ ವಾಕ್ಯದಂತೆ ” ಮಾನವೀಯತೆ ” ಯ ಮೌಲ್ಯವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಶಾಲಾ ಶಿಕ್ಷಕರಾದ ಭಕ್ತೇಶ್ ಮಾತನಾಡಿ ಯೋಗಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವಿದ್ದು ಅದು ಬೆಳೆದು ಬಂದ ಹಾದಿ ಹಾಗೂ ದಿನನಿತ್ಯದ ಜೀವನದಲ್ಲಿ ಯೋಗಭ್ಯಾಸದ ಅವಶ್ಯಕತೆಯನ್ನು ಪ್ರಸ್ತಾವಿಕ ನುಡಿಯ ಮೂಲಕ ತಿಳಿಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಬಣಕಲ್ ಪೊಲೀಸ್ ಠಾಣೆಯ ಉಪಠಾಣಾಧಿಕಾರಿ ಶಶಿ. ವಿಶ್ವ ಯೋಗ ದಿನಾಚರಣೆಯ ಕುರಿತು ಶುಭ ಹಾರೈಸಿದರು. ರಾಷ್ಟ್ರೀಯ ಸ್ವಯಂಸೇವಾ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ದಿಲೀಪ್ ಕನ್ನಗೆರೆ ಹಾಗೂ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶೇಖರಪ್ಪ. ಯೋಗಾಸನದ ವಿವಿಧ ಆಸನಗಳನ್ನು ಮಕ್ಕಳಿಗೆ ಪ್ರಾತ್ಯಕ್ಷಿಕೆಯ ಮೂಲಕ ಪರಿಚಯಿಸಿ ಕೊಟ್ಟರು.

ಈ ಸಂದರ್ಭದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ನಾಗರಾಜು ಸಿ ಮತ್ತು ಉಪಮುಖ್ಯ ಶಿಕ್ಷಕರಾದ ವಸಂತ್ ಹಾರ್ಗೋಡು. ವೇದಿಕೆಯಲ್ಲಿ ಉಪಸ್ಥಿತರಿದ್ದರು
ಶಾಲಾ ಶಿಕ್ಷಕರಾದ ಲೋಕೇಶ್. ಲಿಂಗರಾಜು. ಶ್ವೇತಾ. ಗೀತಾ. ಪ್ರತಾಪ್. ಅಶ್ವಿತಾ. ರಂಜಿತಾ. ಅನುಷಾ. ಆಶಾ. ಪಲ್ಲವಿ. ಪೂಜಾ. ಹಾಗೂ ಶಾಲಾ ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಉತ್ಸುಕತೆಯಿಂದ ಭಾಗವಹಿಸಿದರು.

ಬರಹ ಮತ್ತು ಚಿತ್ರ ಕೃಪೆ
ವಸಂತ್ ಹಾರ್ಗೋಡು.
ವರದಿ
ಮಗ್ಗಲಮಕ್ಕಿ ಗಣೇಶ್.
ಬ್ಯುರೋ ನ್ಯೂಸ್ ಅವಿನ್ ಟಿ.ವಿ

