“ನೂತನ ಅಧ್ಯಕ್ಷರಾಗಿ ರಕ್ಷಿತ್ ಬಡವನದಿಣ್ಣೆ ಆಯ್ಕೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಬಣಕಲ್ ಹೋಬಳಿಯ,ಬಿ.ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಕ್ಷಿತ್ ಬಡವನ ದಿಣ್ಣೆ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ರಕ್ಷಿತ್ ಅವರಿಗೆ ಶುಭ ಹಾರೈಸಿದರು.



ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪಸಭಾಪತಿಗಳಾದ ಎಂ.ಕೆ.ಪ್ರಾಣೇಶ್,ಬಿ.ಜೆ.ಪಿ.ಪಕ್ಷದ ಮುಖಂಡರಾದ ದೀಪಕ್ ದೊಡ್ಡಯ್ಯ,ಸ್ಥಳೀಯ ಕಾಫಿ ಬೆಳೆಗಾರರಾದ ಓ.ಜಿ.ರವಿ,ಓ.ಎಸ್.ಗೋಪಾಲಗೌಡ,ಹೆಚ್.ಟಿ.ಪ್ರಸನ್ನ ಬಿ.ಹೊಸಹಳ್ಳಿ ಹಾಗೂ ಅನೇಕ ರಾಜಕೀಯ ಮುಖಂಡರು,ಕಾಫಿ ಬೆಳೆಗಾರರು,ಬಿ.ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.











